ಮೋದಿ ಹತ್ಯೆಗೆ ಸ್ಕೆಚ್: ಪ್ರವೀಣ್ ಮರ್ಡರ್‌ಗೆ ಲಿಂಕ್? ಎಸ್.ಡಿ.ಪಿ.ಐ. ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ ಮನೆಗೆ ಎನ್.ಐ.ಎ. ದಾಳಿ

0

2 ಮೊಬೈಲ್ ಫೋನ್ ವಶ: ಸೈಬರ್ ತಜ್ಞರ ಆಗಮನ

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಕಾರ‍್ಯದರ್ಶಿ ರಿಯಾಝ್ ಫರಂಗಿಪೇಟೆ ಮನೆಗೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಸೆ.8ರಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.

ಜಲೈ 26ರಂದು ರಾತ್ರಿ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯವ ಮುಂದಾಳು ಪ್ರವೀಣ್ ನೆಟ್ಟಾರು(34ವ)ರವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತು ಎರಡು ತಿಂಗಳ ಹಿಂದೆ ಬಿಹಾರದಲ್ಲಿ ಬಾಂಬ್ ಸೋಟಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಘಟನೆಗೆ ಸಂಬಂಧಿಸಿ ತನಿಖೆ ಮುಂದುವರಿಸಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಎಸ್‌ಡಿಪಿಐ ಮುಖಂಡ ರಿಯಾಝ್ ಫರಂಗಿಪೇಟೆ ಅವರ ಬಿ.ಸಿ.ರೋಡ್ ಸಮೀಪದ ಮನೆಗೆ ದಾಳಿ ನಡೆಸಿದ್ದಾರೆ.

ಬೆಂಗಳೂರು ಎನ್.ಐ.ಎ. ವಿಶೇಷ ಕೋರ್ಟ್ ಮೂಲಕ ಸರ್ಚ್ ವಾರಂಟ್ ಪಡೆದಿದ್ದ ರಾಷ್ಟ್ರೀಯ ತನಿಖಾ ದಳ ಸಂಸ್ಥೆಯ ಅಽಕಾರಿಗಳು ತನಿಖಾದಳದ ವಿವಿಧ ವಿಭಾಗದ ಸುಮಾರು 40 ದಕ್ಷ ಅಧಿಕಾರಿಗಳೊಂದಿಗೆ ೫೫ಕ್ಕೂ ಹೆಚ್ಚು ಖಾಸಗಿ ಇನೋವಾ ಕಾರು ಹಾಗೂ ಸರಕಾರಿ ವಾಹನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರ ಸಹಕಾರದೊಂದಿಗೆ ಪ್ರವೀಣ್ ನೆಟ್ಟಾರ್ ಹತ್ಯೆಗೆ ಸಂಬಂಧಿಸಿ ಸೆ.6ರಂದು ಪುತ್ತೂರು ತಾಲೂಕಿನ ನೆಕ್ಕಿಲಾಡಿ, ಮಿತ್ತೂರು, ಸಾಲ್ಮರ, ಅರಿಯಡ್ಕ, ಸುಳ್ಯ ತಾಲೂಕಿನ ಬೆಳ್ಳಾರೆ, ನಾವೂರು ಮತ್ತು ಮಡಿಕೇರಿ ಹಾಗೂ ಮೈಸೂರು ಸೇರಿದಂತೆ ಒಟ್ಟು 33 ಸ್ಥಳಗಳಿಗೆ ಮಿಂಚಿನ ದಾಳಿ ನಡೆಸಿದ್ದರು.

ಪ್ರವೀಣ್ ಹತ್ಯೆಯಲ್ಲಿ ಭಾಗಿಯಾದ ಹತ್ತು ಆರೋಪಿಗಳ ಮನೆ ಮೇಲೆ, ಹತ್ಯೆ ಬಳಿಕ ಆರೋಪಿಗಳಿಗೆ ಅಶ್ರಯ ನೀಡಿದ ಸ್ಥಳಗಳು, ಕಚೇರಿಗಳು ಹಾಗೂ ಪಿಎಫ್‌ ಐ ಮುಖಂಡರು ಮತ್ತು ಸಕ್ರಿಯ ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು ಕಬಕ ಸಮೀಪದ ಮಿತ್ತೂರಿನಲ್ಲಿರುವ ಫ್ರೀಡಂ ಕಮ್ಯೂನಿಟಿ ಹಾಲ್, ಕಚೇರಿ, ಪಿಎಫ್‌ಐ ಮುಖಂಡರುಗಳಾದ ಪುತ್ತೂರು ಎಪಿಎಂಸಿ ರಸ್ತೆಯ ಸಾದಿಕ್ ಸಾಲ್ಮರ, ಬೆಳ್ಳಾರೆಯ ಇಕ್ಬಾಲ್, ಕುಂಬ್ರದ ಜಾಬೀರ್ ಅರಿಯಡ್ಕ, ಉಪ್ಪಿನಂಗಡಿ ನೆಕ್ಕಿಲಾಡಿಯ ಮಸೂದ್ ಅಗ್ನಾಡಿ, ಮಡಿಕೇರಿಯ ತುಫೇಲ್ ಅವರ ನಿವಾಸ ಸೇರಿದಂತೆ ಒಟ್ಟು 33 ಕಡೆಗಳಲ್ಲಿ ದಾಳಿ ಮಾಡಿ ಶೋಧ ನಡೆಸಿದ್ದರು. ದಾಳಿ ವೇಳೆ ವಿವಿಧೆಡೆ ಬಳಸಿದ ಮದ್ದುಗುಂಡು, ಸುಧಾರಿತ ಶಸ್ತ್ರಾಸ್ತ್ರ, ಕರಪತ್ರಗಳು, ಪುಸ್ತಕಗಳು, ಲ್ಯಾಪ್ ಟ್ಯಾಪ್, ಹಾರ್ಡ್ ಡಿಸ್ಕ್ ಮತ್ತು ನಗದು ವಶ ಪಡಿಸಿಕೊಂಡಿದ್ದ ಅಽಕಾರಿಗಳು ಕೆಲವು ಗೌಪ್ಯ ಮಾಹಿತಿಗಳನ್ನು ಪತ್ತೆ ಹಚ್ಚಿದ್ದರು. ಬಳಿಕ ಕೆಲವು ಶಂಕಿತ ವ್ಯಕ್ತಿಗಳನ್ನು ಪುತ್ತೂರು ದರ್ಬೆಯ ನಿರೀಕ್ಷಣಾ ಮಂದಿರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವಾಹನದಲ್ಲಿ ಕರೆ ತಂದು ವಿಚಾರಣೆಗೆ ಒಳಪಡಿಸಿದ್ದರು. ಇಲ್ಲಿ ದೊರೆತ ಮಾಹಿತಿಯ ಆಧಾರದಲ್ಲಿ ಸೆ.೮ರಂದು ಬೆಳ್ಳಂಬೆಳಗ್ಗೆ ಎಸ್‌ಡಿಪಿಐ ಮುಖಂಡ ರಿಯಾಝ್ ಫರಂಗಿಪೇಟೆ ಮನೆಗೆ ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ. ಎನ್.ಐ.ಎ. ಅಽಕಾರಿಗಳ ದಾಳಿ ವಿಚಾರ ತಿಳಿಯುತ್ತಿದ್ದಂತೆಯೇ ಎಸ್. ಡಿ. ಪಿ.ಐ. ಕಾರ್ಯಕರ್ತರು ರಿಯಾಝ್ ಮನೆ ಮುಂದೆ ಮುಗಿ ಬಿದ್ದಿದ್ದರು. ಬಳಿಕ ಬಂಟ್ವಾಳ ಪೊಲೀಸರು ಮನವೊಲಿಸಿ ಕಾರ್ಯಕರ್ತರನ್ನು ವಾಪಸ್ ಕಳುಹಿಸಿದ್ದಾರೆ. ಮತ್ತೆ ಜಮಾಯಿಸಿದ ಕಾರ‍್ಯಕರ್ತರು ಎನ್.ಐ.ಎ. ಅಧಿಕಾರಿಗಳು ಅಲ್ಲಿಂದ ತೆರಳುವವರೆಗೂ ಉಪಸ್ಥಿತರಿದ್ದರು.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಽಸಿ ಮೂವರು ಪ್ರಮುಖ ಆರೋಪಿಗಳು ಸೇರಿದಂತೆ ಒಟ್ಟು 10 ಮಂದಿಯನ್ನು ಈಗಾಗಲೇ ಪೊಲೀಸರು ಬಂಽಸಿದ್ದಾರೆ. ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಸುಳ್ಯದ ಶಿಹಾಬ್, ಪಾಲ್ತಾಡಿ ಅಂಕತಡ್ಕದ ರಿಯಾಝ್, ಸುಳ್ಯ ಎಲಿಮಲೆಯ ಬಶೀರ್ ಅಲ್ಲದೆ ಸವಣೂರಿನ ಝಾಕಿರ್, ಬೆಳ್ಳಾರೆಯ ಶಫೀಕ್, ಪಳ್ಳಿಮಜಲಿನ ಸದ್ದಾಂ, ಹ್ಯಾರೀಸ್, ಬೆಳ್ಳಾರೆ ಗೌರಿ ಹೊಳೆ ಬಳಿಯ ನೌ-ಲ್, ನಾವೂರಿನ ಆಬಿದ್ ಮತ್ತು ಜಟ್ಟಿಪಳ್ಳದ ಕಬೀರ್ ಸೇರಿದಂತೆ ಹತ್ತು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಎಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ಬಂಽತರ ಜತೆ ರಿಯಾಝ್ ಫರಂಗಿಪೇಟೆರವರು ಸಂಪರ್ಕ ಹೊಂದಿದ್ದರು ಎಂಬ ಕಾರಣಕ್ಕಾಗಿ ಅವರ ಮನೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಇನ್ನೊಂದೆಡೆ ಬಿಹಾರದಲ್ಲಿ ಎರಡು ತಿಂಗಳ ಹಿಂದೆ ಬಾಂಬ್ ಸೋಟ ನಡೆಸಿ ಪ್ರಧಾನಿ ನರೇಂದ್ರ ಮೋದಿಯವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಪ್ರಕರಣದ ಪ್ರತ್ಯೇಕ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳದ ಅಽಕಾರಿಗಳು ಬಾಂಬ್ ಸೋಟಿಸಿದ ಉಗ್ರರ ಜತೆಗೆ ಫೋನ್ ಮೂಲಕ ಸಂಪರ್ಕ ಹೊಂದಿದ್ದ ಕಾರಣಕ್ಕಾಗಿ ರಿಯಾಝ್ -ರಂಗಿಪೇಟೆ ಮನೆಗೆ ಸರ್ಚ್ ವಾರಂಟ್ ಪಡೆದು ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರ್ ಹತ್ಯೆ ಮತ್ತು ಬಿಹಾರದಲ್ಲಿ ನಡೆದ ಬಾಂಬ್ ಸೋಟ ಪ್ರಕರಣದ ಬಳಿಕ ರಿಯಾಜ್ ಫರಂಗಿಪೇಟೆ ಸಹಿತ ಹಲವು ಮುಖಂಡರ ಮೇಲೆ ನಿಗಾ ಇರಿಸಿದ್ದ ಅಽಕಾರಿಗಳು ಇದೀಗ ರಿಯಾಝ್ ಫರಂಗಿಪೇಟೆಗೆ ಬಲೆ ಬೀಸಿದ್ದು ನೊಟೀಸ್ ಜಾರಿಗೊಳಿಸಿದ್ದಾರೆ. ಅಲ್ಲದೆ, ರಿಯಾಝ್ ಮತ್ತು ಅವರ ಪತ್ನಿಯ ಎರಡು ಮೊಬೈಲ್ ಫೋನ್ ಹಾಗೂ ಕೆಲವು ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಉಗ್ರರ ಜತೆಗೆ ಫೋನ್ ಮೂಲಕ ಸಂಭಾಷಣೆ ಮಾಡಿದ್ದರು ಎನ್ನಲಾಗಿರುವ ವಿಚಾರಕ್ಕೆ ಸಂಬಂಧಿಸಿ ಅವರ ಮೊಬೈಲ್ ಫೋನ್ ಪರಿಶೀಲನೆಗೆ ಬೆಂಗಳೂರಿನಿಂದ ಸೈಬರ್ ತಜ್ಞರು ಆಗಮಿಸಿದ್ದಾರೆ. ರಿಯಾಝ್‌ರವರು ಬಿಹಾರದಲ್ಲಿ ಎಸ್‌ಡಿಪಿಐಯ ಉಸ್ತುವಾರಿಯಾಗಿ ಕಾರ‍್ಯ ನಿರ್ವಹಿಸಿದ್ದರು. ಆ ವೇಳೆ ಅಲ್ಲಿನ ಹಲವರೊಂದಿಗೆ ಸಂಪರ್ಕ ಹೊಂದಿದ್ದರು. ರಿಯಾಝ್ ಮನೆಗೆ ಯಾವ ಕಾರಣಕ್ಕೆ ದಾಳಿ ನಡೆಸಲಾಗಿದೆ ಎಂಬುದನ್ನು ಅಽಕಾರಿಗಳು ಇನ್ನೂ ಅಽಕೃತವಾಗಿ ತಿಳಿಸಿಲ್ಲ.

ಹತ್ಯೆ ಸಂಚು ಬಗ್ಗೆ ನನಗೆ ಸಂಬಂಧ ಇಲ್ಲ :
ಎನ್ ಐ ಎ ಅಧಿಕಾರಿಗಳ ತಂಡವು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರು ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ರಿಯಾಝ್ ಫರಂಗಿಪೇಟೆ ಅವರು ಆಗ್ರಹಿಸಿದ್ದಾರೆ. ಜುಲೈ ತಿಂಗಳು ಬಿಹಾರದಲ್ಲಿ ನಡೆದ ಘಟನೆಗೆ ಸಂಬಂಽಸಿದಂತೆ ಇದೀಗ ನನ್ನ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ನಾನು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದು, ಬಿಹಾರ ರಾಜ್ಯ ಉಸ್ತುವಾರಿ ಜವಾಬ್ದಾರಿಯೂ ಇದೆ. ಅಲ್ಲಿನ ಹತ್ಯೆ ಸಂಚು ಬಗ್ಗೆ ನನಗೆ ಯಾವುದೇ ಸಂಬಂಧ ಇಲ್ಲ. ಕೆಲವೊಂದು ದಾಖಲೆ ಪತ್ರ ಸಹಿತ ನನ್ನ ಮತ್ತು ನನ್ನ ಪತ್ನಿಯ ಮೊಬೈಲ್ ಫೋನ್ ಎನ್ ಐ ಎ ಅಧಿಕಾರಿಗಳು ಕೊಂಡೊಯ್ದಿದ್ದಾರೆ ಎಂದು ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here