ಸೆ 11: ಕೆದಂಬಾಡಿ ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ಇದರ ವತಿಯಿಂದ ಶ್ರಾವಣ ಸಂಭ್ರಮ -2022

0

ಕೆದಂಬಾಡಿ: ಒಕ್ಕಲಿಗ ಗೌಡ ಸೇವಾ ಸಂಘ ಕೆದಂಬಾಡಿ ಗ್ರಾಮ ಸಮಿತಿ, ಯುವ ಘಟಕ, ಮಹಿಳಾ ಘಟಕ ಇವುಗಳ ಸಹಕಾರದೊಂದಿಗೆ ಒಕ್ಕಲಿಗ ಸ್ವ ಸಹಾಯ ಸಂಘದ ಒಕ್ಕೂಟ ಕೆದಂಬಾಡಿ ಇದರ ನೇತೃತ್ವದಲ್ಲಿ ಶ್ರಾವಣ ಸಂಭ್ರಮ- 2022 ಎಂಬ ವಿನೂತನ ಕಾರ್ಯಕ್ರಮ ಶ್ರೀ ದೇವತಾ ಭಜನಾ ಮಂದಿರ ಶ್ರೀ ಕ್ಷೇತ್ರ ದೇವಗಿರಿ ತಿಂಗಳಾಡಿಯಲ್ಲಿ ಸೆ 11 ರಂದು ನಡೆಯಲಿದೆ,ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ, ಮಕ್ಕಳಿಗೆ,ಮಹಿಳೆಯರಿಗೆ,ಪುರುಷರಿಗೆ ವಿವಿಧ ಅಟೋಟ ಸ್ಫರ್ಧೆಗಳು ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ಕೆದಂಬಾಡಿ ಇದರ ಅಧ್ಯಕ್ಷರಾದ ಶಿವಣ್ಣ ಗೌಡ ಪಯಂದೂರು ವಹಿಸಲಿದ್ದು ,ಉದ್ಘಾಟನೆಯನ್ನು ಒಕ್ಕಲಿಗ ಸ್ವಸಹಾಯ ಸಂಘಗಳ ಒಕ್ಕೂಟ ಕೆದಂಬಾಡಿ ಇದರ ಮಾಜಿ ಅಧ್ಯಕ್ಷರಾದ ದೇವಪ್ಪ ಗೌಡ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಒಕ್ಕಲಿಗ ಗೌಡ ಸೇವಾ ಸಂಘ ಪೂತ್ತುರು ಇದರ ಅಧ್ಯಕ್ಷರಾದ ವಿಶ್ವನಾಥ ಗೌಡ ಕೆಯ್ಯುರೂ,ಒಕ್ಕಲಿಗ ಸ್ವ ಸಹಾಯ ಟ್ರಸ್ಟಿನ ಅಧ್ಯಕ್ಷರಾದ ಡಿ ವಿ ಮನೋಹರ್, ತಾಲೂಕು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಸುಬ್ರಾಯ ಗೌಡ ಪಾಲ್ತಾಡಿ ಹಾಗೂ ಮಹಿಳಾ ಘಟಕದ ಅಧ್ಯಕ್ಷರಾದ ಮೀನಾಕ್ಷಿ ಡಿ ಗೌಡ, ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ಕುಂಬ್ರ ವಲಯದ ಅಧ್ಯಕ್ಷರಾದ ಲೋಕೇಶ್ ಚಾಕೋಟೆ, ಹಾಗೂ ಕಾರ್ಯಕ್ರಮ ದಲ್ಲಿ ಸಂಪನ್ಮೂಲ ವ್ಯಕ್ತಿ ಯಾಗಿ ಪೂರ್ಣತ್ಮರಾಮ ಈಶ್ವರಮಂಗಳ ಭಾಗವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಗ್ರಾಮದ ಎಲ್ಲಾ ಸಮಾಜ ಬಾಂಧವರು ಪಾಲ್ಗೊಳ್ಳುವಂತೆ ಗ್ರಾಮ ಸಮಿತಿ ಅಧ್ಯಕ್ಷ ಶಿವರಾಮ ಗೌಡ ಇದ್ಯಾಪೆ,ಒಕ್ಕಲಿಗ ಸ್ವಸಹಾಯ ಗುಂಪುಗಳ ಒಕ್ಕೂಟದ ಇದರ ಅಧ್ಯಕ್ಷರಾದ ಶಿವಣ್ಣ ಗೌಡ ಪಯಂದೂರು,ಮಹಿಳಾ ಘಟಕದ ಅದ್ಯಕ್ಷೆ ರೇಖಾ ರಾಘವ ಗೌಡ ಕೆರೆಮೂಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here