ವಿಟ್ಲ: ಆಟೋ ರಿಕ್ಷಾ ಪಲ್ಟಿ ಹೊಡೆದು ಬಳಿಕ ಟೆಂಪೋ ಟ್ರಾವೆಲ್ಲರ್ ಗೆ ಡಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಸೆ.9ರ ತಡರಾತ್ರಿ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ನಡೆದ ಬಗ್ಗೆ ವರದಿಯಾಗಿದೆ.
ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಅಟೋ ರಿಕ್ಷಾ ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಮಧ್ಯೆ ಬುಡೋಳಿ ಸಮೀಪ ಅಪಘಾತ ಸಂಭವಿಸಿದೆ.
ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಂಜೇಶ್ವರ ನಿವಾಸಿಗಳು ಇಬ್ಬರು ಗಂಭೀರ ಗಾಯಗೊಂಡಿದ್ದು, ಮತ್ತೊಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದುಬಂದಿದೆ. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯರು ಸೋಷಿಯಲ್ ಇಕ್ವ ಮಾಣಿಯ ಆಂಬ್ಯುಲೆನ್ಸ್ ನ ಸದಸ್ಯರ ಸಹಕಾರದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ.