ಸೆ.10: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಪುತ್ತೂರು ಪ್ರೆಸ್ ಕ್ಲಬ್‌ಗೆ ಭೇಟಿ

0

ಪುತ್ತೂರು:ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹಾಗೂ ಕರ್ನಾಟಕ ಸರ್ಕಾರದ ಪತ್ರಿಕಾ ಭವನ ನಿರ್ಮಾಣ ಸಮಿತಿ ಸದಸ್ಯ ಹೆಚ್.ಬಿ.ಮದನ ಗೌಡರವರು ಸೆ.10ರಂದು ಸಂಜೆ 4 ಗಂಟೆಗೆ ಪುತ್ತೂರು ಪ್ರೆಸ್‌ಕ್ಲಬ್‌ಗೆ ಆಗಮಿಸಲಿದ್ದಾರೆ.

ಅವರು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಪಡೆದ ಪುತ್ತೂರು ತಾಲೂಕಿನ ಪತ್ರಕರ್ತರಿಗೆ ಗುರುತಿನ ಕಾರ್ಡ್ ವಿತರಣೆ ಮತ್ತು ಪತ್ರಕರ್ತರಿಗೆ ಆರೋಗ್ಯ ಕಾರ್ಡ್ ವಿತರಣೆ ಮಾಡಲಿದ್ದಾರೆ.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ದ.ಕ ಜಿಲ್ಲಾ ವಾರ್ತಾ ಅಽಕಾರಿ ರವಿರಾಜ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.ಈ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಪಡೆದುಕೊಂಡಿರುವ ಸುದ್ದಿ ಬಿಡುಗಡೆಯ ವರದಿಗಾರರೂ ಭಾಗವಹಿಸುವಂತೆ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರವಣ್ ಕುಮಾರ್ ನಾಳ ತಿಳಿಸಿದ್ದಾರೆ.

ಪತ್ರಕರ್ತರ ಸಮಸ್ಯೆ, ಬೇಡಿಕೆಗಳ ಬಗ್ಗೆ ಸದಾ ಹೋರಾಟ ನಡೆಸುತ್ತಿರುವ ಶಿವಾನಂದ ತಗಡೂರು ಅವರು, ಅಗಲಿರುವ ಸುದ್ದಿಯ ಹಿರಿಯ ವರದಿಗಾರರಾಗಿದ್ದ ನಾರಾಯಣ ನಾಯ್ಕ್ ಅಮ್ಮುಂಜ ಹಾಗೂ ಖಾದರ್ ಸಾಹೇಬ್ ಕಲ್ಲುಗುಡ್ಡೆ ಇವರ ಕುಟುಂಬಕ್ಕೆ ಸರಕಾರದಿಂದ ತಲಾ 5 ಲಕ್ಷ ರೂ.ಪರಿಹಾರ ಧನ ದೊರಕಿಸಿಕೊಡಲು ಸರಕಾರದ ಮೇಲೆ ಒತ್ತಡ ತಂದು ಸಹಕರಿಸಿದ್ದರು.ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ನೇತೃತ್ವದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ತಂಡವೂ ಈ ನಿಟ್ಟಿನಲ್ಲಿ ಸಹಕಾರ ನೀಡಿತ್ತು.

LEAVE A REPLY

Please enter your comment!
Please enter your name here