ನೆಟ್ಟಣಿಗೆ ಮುಡ್ನೂರು:ಸೆ 11 (ನಾಳೆ)ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ನೆಟ್ಟಣಿಗೆ ಮುಡ್ನೂರು ಇದರ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ,ಸಾಧಕರಿಗೆ ಸನ್ಮಾನ

0

ನೆಟ್ಟಣಿಗೆ ಮುಡ್ನೂರು: ಒಕ್ಕಲಿಗ ಗೌಡ ಸೇವಾ ಸಂಘ ನೆಟ್ಟಣಿಗೆ ಮುಡ್ನೂರು ಗ್ರಾಮ ಸಮಿತಿ, ಯುವ ಘಟಕ, ಮಹಿಳಾ ಘಟಕ ಇವುಗಳ ಸಹಕಾರದೊಂದಿಗೆ ಒಕ್ಕಲಿಗ ಸ್ವ ಸಹಾಯ ಸಂಘದ ಒಕ್ಕೂಟ ನೆಟ್ಟಣಿಗೆ ಮುಡ್ನೂರು ಇದರ ನೇತೃತ್ವದಲ್ಲಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ, ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ,ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸೆ 11 ರಂದು ಸಮಯ ಮದ್ಯಾಹ್ನ 2.30 ಗಂಟೆಗೆ ಗಜಾನನ ಹಿರಿಯ ಪ್ರಾಥಮಿಕ ಶಾಲೆ ಈಶ್ವರಮಂಗಳದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ನೆಟ್ಟಣಿಗೆ ಮುಡ್ನೂರು ಇದರ ಅಧ್ಯಕ್ಷರಾದ ಶೇಷಪ್ಪ ಗೌಡ ಮೆಣಸಿನಕಾನ ವಹಿಸಲಿದ್ದು, ದೀಪ ಪ್ರಜ್ವಲನೆಯನ್ನು ಪ್ರಗತಿಪರ ಕೃಷಿಕರು ಹೊನ್ನಪ್ಪ ಗೌಡ ಕೆಮ್ಮತ್ತಡ್ಕ ನೆರವೇರಿಸಲಿದ್ದು ಮುಖ್ಯ ಅತಿಥಿಗಳಾಗಿ ಒಕ್ಕಲಿ ಗೌಡ ಸೇವಾ ಸಂಘ (ರಿ) ಪುತ್ತೂರು ಇದರ ಅಧ್ಯಕ್ಷರಾದ ವಿಶ್ವನಾಥ ಗೌಡ ಕೆಯ್ಯುರು, ಒಕ್ಕಲಿಗ ಸ್ವ ಸಹಾಯ ಟ್ರಸ್ಟಿನ ಅಧ್ಯಕ್ಷರಾದ ಡಿ ವಿ ಮನೋಹರ್, ತಾಲೂಕು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷರಾದ ನಾಗೇಶ್ ಗೌಡ ಕೇಡೆಂಜಿ ಹಾಗೂ ಮಹಿಳಾ ಘಟಕದ ಅಧ್ಯಕ್ಷರಾದ ಮೀನಾಕ್ಷಿ ಡಿ ಗೌಡ ಮತ್ತು ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ಕುಂಬ್ರ ವಲಯದ ಅಧ್ಯಕ್ಷರಾದ ಲೋಕೇಶ್ ಚಾಕೋಟೆ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಗ್ರಾಮದ ಎಲ್ಲಾ ಸಮಾಜ ಬಾಂಧವರು ಪಾಲ್ಗೊಳ್ಳುವಂತೆ ಒಕ್ಕಲಿಗ ಸ್ವಸಹಾಯ ಗುಂಪುಗಳ ಒಕ್ಕೂಟದ ಇದರ ಅಧ್ಯಕ್ಷರಾದ ಶೇಷಪ್ಪ ಗೌಡ ಮೆಣಸಿನಕಾನ,ಗ್ರಾಮ ಸಮಿತಿ ಅಧ್ಯಕ್ಷ ಡಿ ದಿವಾಕರ ಗೌಡ ಮಡ್ಯಳಮಜಲು ,ಮಹಿಳಾ ಘಟಕದ ಅಧ್ಯಕ್ಷೆ ಮೋಹನಾಂಗಿ ಬೀಜಂತಡ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here