ಕುಂಜಾರು ಮದಗ ಜನಾರ್ದನ ದೇವಸ್ಥಾನದಲ್ಲಿ ಚಂಡಿಕಾಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುತ್ತೂರು:ಪಡ್ನೂರು ಗ್ರಾಮದ ಕುಂಜಾರು ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಅ.೨ರಂದು ನಡೆಯಲಿರುವ ಚಂಡಿಕಾಯಾಗದ ಆಮಂತ್ರಣ ಪತ್ರಿಕೆಯನ್ನು ಸೆ.11ರಂದು ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.


ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾರಕರೆ ವೆಂಕಟ್ರಮಣ ಭಟ್ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಚೈತ್ರ ನಾರಾಯಣ ಸೇಡಿಯಾಪು, ಬಾಲಕೃಷ್ಣ ಜೋಯಿಷ, ಮಧುಸೂದನ ಪಡ್ಡಾಯೂರು, ಲೋಕೇಶ್, ಬನ್ನೂರು ಗ್ರಾ.ಪಂ ಸದಸ್ಯರಾದ ರಮಣಿ ಡಿ ಗಾಣಿಗ, ಗಿರಿಧರ ಪಂಜಿಗುಡೆ, ಗಣೇಶ್, ಪ್ರಮುಖರಾದ ರಮೇಶ್ ರೆಂಜಾಳ, ಪೂವಪ್ಪ ದೇಂತಡ್ಕ, ಶ್ರೀಧರ ಕುಂಜಾರು, ಬಾಲಕೃಷ್ಣ ನಾಕ್ ಮಾಲ್ತೊಟ್ಟು, ರಾಧಾಕೃಷ್ಣ ಕುಂಜಾರು, ರಾಜೇಶ್ ಆಟಿಕ್ಕು, ಜಗದೀಶ್ ಆಟಿಕ್ಕು ಸೇರಿದಂತೆ ಹಲವು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here