ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆಆಯ್ಕೆ

0

ಪುತ್ತೂರು:ಬೆಂಗಳೂರಿನ ಸಾಂದೀಪನಿ ವಿದ್ಯಾ ಭವನದಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ತರುಣ ವರ್ಗದ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ವಿವೇಕಾನಂದ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದುಕೊಂಡು ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

 
ವೈಯಕ್ತಿಕ ವಿಭಾಗದ ಯೋಗಾಸನ ಸ್ಫರ್ಧೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್‌ಕೆ.ಜೆ(ಪುತ್ತೂರಿನ ನೆಹರೂ ನಗರದ ಪಿಎಮ್‌ಜಿಎಸ್‌ವೈ ಇಂಜಿನಿಯರ್‌ ಜನಾರ್ದನ ಕೆ.ಬಿ ಮತ್ತುಜ್ಯೋತಿದಂಪತಿ ಪುತ್ರ) ಪ್ರಥಮ ಸ್ಥಾನ ಗಳಿಸಿದ್ದಾರೆ. ರಿಧಮಿಕ್ ವಿಭಾಗದ ಸ್ಫರ್ಧೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಮನ್ನಿತ್‌ ಎನ್‌ ಗೌಡ (ಬನ್ನೂರಿನ ರಮೇಶ ಗೌಡ ಎನ್ ಮತ್ತು ನಳಿನಿ ದಂಪತಿ ಪುತ್ರ) ಪ್ರಥಮ ಸ್ಥಾನ ಗಳಿಸಿದ್ದಾರೆ.


ಬಾಲಕಿಯರ ವಿಭಾಗದ ತಂಡದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಸಾಗರಿ ಎನ್‌ರೈ(ಮೈಸೂರಿನ ನೂತನ್‌ಕುಮಾರ್ ಮತ್ತು ಸುಚಿತ್ರಾರೈ ದಂಪತಿ ಪುತ್ರಿ), ದೀಕ್ಷಾ ಕೆ(ಪುಣಚದ ಕೃಷ್ಣಪ್ಪ ಪೂಜಾರಿ ಮತ್ತು ಮಲ್ಲಿಕಾ ದಂಪತಿ ಪುತ್ರಿ), ನಿಧಿ ಎಂ. ಎಸ್( ಬೆಳ್ಳಿಪ್ಪಾಡಿಯ ಶ್ರೀಧರ ಮತ್ತು ಶಶಿಕಲಾ ದಂಪತಿ ಪುತ್ರಿ) ವಾಣಿಜ್ಯ ವಿಭಾಗದ ಸಿಂಚನಾ ಎ(ಕಾಣಿಯೂರಿನ ದಾಮೋದರಗೌಡ ಮತ್ತು ಹೇಮಲತಾ ದಂಪತಿ ಪುತ್ರಿ) ಮತ್ತು ಅನುಜ್ಞಾ ಕೆ (ದರ್ಬೆಯ ಕುಶಾಲಪ್ಪಗೌಡ ಮತ್ತು ಪ್ರೇಮಾದಂಪತಿ ಪುತ್ರಿ) ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ನವೆಂಬರ್ 30ರಂದು ಸೂರತ್‌ನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ಈ ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ.ಜ್ಯೋತಿ ಮತ್ತು ಯತೀಶ್‌ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ.ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here