ಗೋಳಿತ್ತೊಟ್ಟು: ವಿಹಿಂಪ ಬಜರಂಗದಳದಿಂದ ದಿ.ಮಹೇಶ್ ಡೆಬ್ಬೇಲಿ ಸ್ಮರಣಾರ್ಥ ರಕ್ತದಾನ ಶಿಬಿರ

0

ನೆಲ್ಯಾಡಿ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಗೋಳಿತ್ತೊಟ್ಟು ಘಟಕ, ಉಪ್ಪಿನಂಗಡಿ ಪ್ರಖಂಡದ ವತಿಯಿಂದ ಎ.ಜೆ.ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ಗೋಳಿತ್ತೊಟ್ಟು ಘಟಕದ ಸಕ್ರಿಯ ಸದಸ್ಯರಾಗಿದ್ದ ದಿ.ಮಹೇಶ್ ಡೆಬ್ಬೇಲಿ ಸ್ಮರಣಾರ್ಥವಾಗಿ ಬೃಹತ್ ರಕ್ತದಾನ ಶಿಬಿರ ಸೆ.11ರಂದು ಗೋಳಿತ್ತೊಟ್ಟು ಶ್ರಿ ಸಿದ್ದಿವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು.

ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಚಾಲಕರಾದ ರಘು ಸಕಲೇಶಪುರ ಶಿಬಿರ ಉದ್ಘಾಟಿಸಿ ಮಾತನಾಡಿ, ರಕ್ತದಾನ ಶ್ರೇಷ್ಠದಾನವಾಗಿದೆ. ಬಜರಂಗದಳದ ಜೀವ ಉಳಿಸುವ ಸೇವಾ ಕಾರ್ಯ ಶ್ಲಾಘನೀಯ. ಯಾವುದೇ ಕಠಿಣ ಪರಿಸ್ಥಿತಿಯಲ್ಲೂ ಬಜರಂಗದಳ ಹಿಂದೂ ಸಮಾಜದ ಸೇವೆಗೆ ಸುರಕ್ಷತೆಗೆ ಬದ್ದವಾಗಿದೆ ಎಂದರು. ಅತಿಥಿಗಳಾಗಿದ್ದ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಉಪಾಧ್ಯಕ್ಷರಾದ ಭಾಸ್ಕರ ಧರ್ಮಸ್ಥಳ ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು. ಎ.ಜೆ.ಆಸ್ಪತ್ರೆಯ ರಕ್ತನಿಧಿ ಕೇಂದ್ರದ ವ್ಯವಸ್ಥಪಕ ಗೋಪಾಲಕೃಷ್ಣರವರು ಮಾತನಾಡಿ, ಆಸ್ಪತ್ರೆಗಳಿಗೆ ಯಾವುದೇ ಸಂದರ್ಭದಲ್ಲಿಯೂ ರಕ್ತದ ಕೊರತೆ ಉಂಟಾಗದಂತೆ ಕಾರ್ಯನಿರ್ವಹಿಸುವ ಬಜರಂಗದಳದ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿ ರಕ್ತದಾನದ ಬಗ್ಗೆ ಮಾಹಿತಿ ನೀಡಿದರು. ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಹ ಕಾರ್ಯದರ್ಶಿ ನವಿನ್ ನೆರಿಯರವರು ರಕ್ತದಾನ ಮಾಡುವ ಮುಖಾಂತರ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು

ವಿಶ್ವ ಹಿಂದೂ ಪರಿಷತ್ ಉಪ್ಪಿನಂಗಡಿ ಪ್ರಖಂಡದ ಅಧ್ಯಕ್ಷ ಸುದರ್ಶನ್, ಶ್ರೀ ಸಿದ್ದಿ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಅಲೆಕ್ಕಿ, ಪ್ರಗತಿಪರ ಕೃಷಿಕ ವೆಂಕಟ್ರಮಣ ಸುಲ್ತಾಜೆ, ದಿ.ಮಹೇಶ್ ಡೆಬ್ಬೇಲಿಯವರ ತಂದೆ ನೋಣಯ್ಯ ಡೆಬ್ಬೇಲಿ, ಸ್ಥಾನೀಯ ಘಟಕದ ಅಧ್ಯಕ್ಷ ಡೀಕಯ್ಯ ಪೂಜಾರಿ, ಗೋಳಿತ್ತೊಟ್ಟು ಬಜರಂಗದಳ ಸಂಚಾಲಕ ರೋಹಿನಾಥ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಜರಂಗದಳ ಉಪ್ಪಿನಂಗಡಿ ಪ್ರಖಂಡ ಸಂಚಾಲಕ ಮೂಲಚಂದ್ರರವರು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸಭಾಷ್ ಪುರ ಕಾರ್ಯಕ್ರಮ ನಿರ್ವಹಿಸಿದರು. ನಾಗೇಶ್ ಪೆರಣ ವಂದಿಸಿದರು. ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಪ್ಪಿನಂಗಡಿ ಪ್ರಖಂಡದ ಪದಾಧಿಕಾರಿಗಳು, ಅನ್ಯಾನ್ಯ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು. ಒಟ್ಟು ಎಂಬತ್ತಮೂರು ಮಂದಿ ರಕ್ತದಾನಿಗಳು ಶಿಬಿರದಲ್ಲಿ ರಕ್ತದಾನ ಮಾಡಿದರು.

 

LEAVE A REPLY

Please enter your comment!
Please enter your name here