ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

0

ಪುತ್ತೂರು: ಐ.ಐ.ಟಿ ಸಂಸ್ಥೆಗಳಿಗೆ ಪ್ರವೇಶ ಕಲ್ಪಿಸುವ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ರಾಷ್ಟ್ರಮಟ್ಟದಲ್ಲಿ ನಡೆದ ಜೆಇಇ ಅಡ್ವಾನ್ಸ್‌ ಪರೀಕ್ಷೆಯಲ್ಲಿ ಶ್ರೀನಿಧಿ ಐ 12331ನೇ ರ‍್ಯಾಂಕ್‌ಗಳಿಸಿದ್ದಾರೆ.  ಜೆಇಇ ಮೈನ್ಸ್ ಪರೀಕ್ಷೆಯಲ್ಲಿ 98.42 ಪಸಂಟೈಲ್ ಅಂಕ, ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 64 ನೇ ರ‍್ಯಾಂಕ್, ಇಂಜಿನಿಯರಿಂಗ್ ನಲ್ಲಿ 294ನೇ ರ‍್ಯಾಂಕ್ ಗಳಿಸಿದ್ದರು. ಇವರು ಕಾಸರಗೊಡಿನ ಪೆರ್ಲದ ಹರೀಶ್ ಐ ಮತ್ತು ಜಯಪ್ರದ ಕೆ ದಂಪತಿ ಪುತ್ರ.

ಕೀರ್ತನ್‌ ಅಡಿಗ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ 27707 ನೇ ರ‍್ಯಾಂಕ್‌ ಗಳಿಸಿದ್ದಾರೆ. ಇವರು ಜೆಇಇ ಮೈನ್ಸ್ ಪರೀಕ್ಷೆಯಲ್ಲಿ 98.47 ಪಸಂಟೈಲ್ ಅಂಕ, ಇಂಜಿನಿಯರಿಂಗ್‌ನಲ್ಲಿ 658ನೇ ರ‍್ಯಾಂಕ್‌ಗಳನ್ನು ಗಳಿಸಿದ್ದರು. ಇವರು ಕಾಸರಗೋಡಿನ ಬಾಲಕೃಷ್ಣ ಅಡಿಗ ಮತ್ತು ಸುಲೋಚನಾ ದಂಪತಿ ಪುತ್ರ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

LEAVE A REPLY

Please enter your comment!
Please enter your name here