ಬಡಗನ್ನೂರು: ಅಯುಷ್ಮಾನ್ ಕಾರ್ಡ್ ನೋಂದಣಿ ಅಭಿಯಾನ

0

ಬಡಗನ್ನೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸಾಮಾಜಿಕ ಕೇಂದ್ರ ವತಿಯಿಂದ ಉಚಿತ ಅಯುಷ್ಮಾನ್  ಚೀಟಿ ನೋಂದಾವಣೆ ಅಭಿಯಾನ ಸೆ.9ರಂದು ಪ್ರಾರಂಭಗೊಂಡಿದೆ.

ತಾಲೂಕು ಭಜನಾ ಸಂಘದ ಅಧ್ಯಕ್ಷ ಸುಬ್ಬಯ್ಯ ರೈ ಹಲಸಿನಡಿ ಅಭಿಯಾನವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.
ಅರಿಯಡ್ಕ ವಲಯ ಮೇಲ್ವಿಚಾರಕ ಮೋಹನ್ ಪ್ರಾಸ್ತಾವಿಕ ಮಾತನಾಡಿ ಬಡ ಜನರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆಯುವಲ್ಲಿ ಅಯುಷ್ಮಾನ್  ಚೀಟಿ ಮಹತ್ವವಾಗಿದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಹೇಳಿದರು. ಕಾರ್ಯಕ್ರಮದಲ್ಲಿ ಬಡಗನ್ನೂರು ಬಿ ಒಕ್ಕೂಟದ ಸೇವಾ ಪ್ರತಿನಿಧಿ ಪುಷ್ಪ ಹಾಗೂ ಪ್ರಗತಿ ಬಂಧು ಹಾಗೂ ಸ್ವ ಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here