ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಹರೀಶ್ ಶಾಸ್ತ್ರೀ ಯವರಿಗೆ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವತಿಯಿಂದ ಸನ್ಮಾನ

0

ಪುತ್ತೂರು: ಮೂಡಬಿದ್ರೆಯ ಕನ್ನಡ ಭವನದಲ್ಲಿ ನಡೆದಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ವಿವೇಕಾನಂದ ಪದವಿಪೂರ್ವಕಾಲೇಜಿನ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹರೀಶ್ ಶಾಸ್ತ್ರೀಯವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.

ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರವೀಂದ್ರ ಪಿ ಶಾಲು ಹೊದಿಸಿ ಬ್ಯಾಗ್ ಮತ್ತು ಸ್ಮರಣಿಕೆಯನ್ನು ನೀಡಿ ಗೌರವಿಸಿದರು.ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್‌ರಾವ್, ಸಂಚಾಲಕ ಎಂ. ಗೋಪಾಲಕೃಷ್ಣ ಭಟ್, ಕೋಶಾಧಿಕಾರಿ ಸಚಿನ್ ಶೆಣೈ, ಸದಸ್ಯರಾದ ಕೆ.ಎನ್ ಸುಬ್ರಹ್ಮಣ್ಯ, ವತ್ಸಲಾರಾಜ್ಞಿ, ಡಾ.ಮುರಳೀಕೃಷ್ಣ ರೈ, ಡಾ.ಕೃಷ್ಣ ಪ್ರಸನ್ನ ಕೆ, ಇಂದಿರಾ, ಪ್ರಾಂಶುಪಾಲ ಮಹೇಶ ನಿಟಿಲಾಪುರ, ಉಪನ್ಯಾಸಕರು, ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು.

ಹರೀಶ್ ಶಾಸ್ತ್ರೀಯವರು ೧೯೯೭ರಿಂದ ಸುಮಾರು೨೫ ವರ್ಷಗಳ ಕಾಲ ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ಶಿಕ್ಷಕರಾಗಿಸೇವಾ ಅನುಭವವನ್ನು ಹೊಂದಿದ್ದಾರೆ. ಇವರುಪುತ್ತೂರಿನ ಬಪ್ಪಳಿಗೆಯ ದಿ.ರಾಮಕೃಷ್ಣ ಶಾಸ್ತ್ರೀ ಬಿ ಮತ್ತು ದಿ.ದೇವಕಿದಂಪತಿಪುತ್ರ. ತಮ್ಮಪ್ರಾಥಮಿಕ ಶಿಕ್ಷಣವನ್ನು ಬಪ್ಪಳಿಗೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಿಕ್ಷಣವನ್ನು ಕೊಂಬೆಟ್ಟಿನ ಸರಕಾರಿ ಪ್ರೌಢಶಾಲೆ, ಪಿಯುಸಿ ಮತ್ತು ಪದವಿ ಶಿಕ್ಷಣವನ್ನು ನೆಹರೂನಗರದ ವಿವೇಕಾನಂದ ಸಂಸ್ಥೆಯಲ್ಲಿ ಪಡೆದು ಸ್ನಾತಕೋತ್ತರ ಪದವಿಯನ್ನು ಮಂಗಳೂರಿನ ವಿಶ್ವವಿದ್ಯಾನಿಲಯದಲ್ಲಿ ಪೂರೈಸಿದ್ದರು. ಇವರುಕೊಂಬೆಟ್ಟು ಸರಕಾರಿ ಪ್ರೌಢಶಾಲೆಯ ಶತಮಾನೋತ್ಸವದ ಅಂಗವಾಗಿ ನಡೆದಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದರು. ಅಲ್ಲದೆ ಲಾಕ್‌ಡೌನ್ ಸಮಯದಲ್ಲಿ ಮೊದಲ ಬಾರಿಗೆಆನ್ ಲೈನ್ ತರಗತಿಗಳನ್ನು ನಡೆಸಿದ ಹೆಗ್ಗಳಿಕೆ ಇವರದಾಗಿತ್ತು. ವಿದ್ಯಾರ್ಥಿಗಳಿಗೆಕ್ವಿಝ್ ಕಾರ್ಯಕ್ರಮಗಳನ್ನು ಹಲವಾರು ವಿದ್ಯಾ ಸಂಸ್ಥೆಗಳಲ್ಲಿನಡೆಸಿದ ಪ್ರಾವಿಣ್ಯತೆಯನ್ನು ಪಡೆದಿರುವ ಇವರು ಭೌತಶಾಸ್ತ್ರ ವಿಷಯದಲ್ಲಿ ಕೋಚಿಂಗ್‌ ತರಗತಿಯನ್ನು ನೀಡುತ್ತಾ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕರಾಗಿದ್ದಾರೆ.

LEAVE A REPLY

Please enter your comment!
Please enter your name here