ರಾಜ್ಯಪಾಲರನ್ನು ಭೇಟಿಯಾದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್

0

  • ಕನ್ನಡದಲ್ಲಿಯೇ ಸಂಭಾಷಣೆ ನಡೆಸಿದ ಥಾವರ್ ಚಂದ್ ಗೆಹ್ಲೋಟ್

ಪುತ್ತೂರು: ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಕೋಶಾಧ್ಯಕ್ಷ ಡಾ. ಹರ್ಷಕುಮಾರ್ ರೈ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಸುರೇಶ್ ನಾಯಕ್ ಅವರು ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಬೆಂಗಳೂರಿನ ರಾಜಭವನದಲ್ಲಿ ಭೇಟಿಯಾದರು.

ಈ ಸಂದರ್ಭದಲ್ಲಿ ಕನ್ನಡದಲ್ಲಿ ಸಂಭಾಷಣೆ ನಡೆಸಿದ ರಾಜ್ಯಪಾಲರು ಪುತ್ತೂರು ತಾಲೂಕಿನ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳ ಬಗ್ಗೆ ವಿಚಾರಿಸಿದರು. ಅಲ್ಲದೆ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಲಿಮ್ಕಾ ದಾಖಲೆಯ ಸುರೇಶ್ ನಾಯಕ್ ಅವರಿಗೆ ಅಭಿನಂದನೆ ತಿಳಿಸಿದರು.

LEAVE A REPLY

Please enter your comment!
Please enter your name here