ಸೆ.15: ಬಿರುಮಲೆ ಪ್ರಜ್ಞಾಶ್ರಮದಲ್ಲಿ ಮಾಜಿ ಸಚಿವ ರಮಾನಾಥ ರೈರವರ ಹುಟ್ಟುಹಬ್ಬ ಆಚರಣೆ

0

ಪುತ್ತೂರು : ಮಾಜಿ ಸಚಿವ ಬೆಳ್ಳಿಪ್ಪಾಡಿ ರಮಾನಾಥ ರೈ ಅಭಿಮಾನಿ ಬಳಗ ಪುತ್ತೂರು ಇವರ ನೇತೃತ್ವದಲ್ಲಿ ಸೆ.15ರಂದು ಬಿರುಮಲೆ ಬೆಟ್ಟದಲ್ಲಿರುವ ಪ್ರಜ್ಞಾಶ್ರಮದಲ್ಲಿ ರಮಾನಾಥ ರೈರವರ ೭೧ನೇ ಹುಟ್ಟುಹಬ್ಬ ಆಚರಣೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಆಶ್ರಮದ ಸದಸ್ಯರಿಗೆ ಬಟ್ಟೆ ವಿತರಣೆ, ಸಾಧಕರಿಗೆ ಸನ್ಮಾನ, ಚಂದ್ರಶೇಖರ ಹೆಗ್ಡೆ ಮತ್ತು ತಂಡದವರಿಂದ ಸಂಗೀತ ರಸಮಂಜರಿ ನಡೆಯಲಿದೆ.

ಎನ್‌ಎಸ್‌ಯುಐ ಕರ್ನಾಟಕ ಸಮಿತಿ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಯಬೆ ಕಾರ್ಯಕ್ರಮದ ಪ್ರಸ್ತಾವನೆ ಮಾಡಲಿದ್ದಾರೆ. ಕೊಂಬೆಟ್ಟು ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಾಲಯದ ಮಾಜಿ ಅಧ್ಯಕ್ಷ ಸುಧಾಕರ ಶೆಟ್ಟಿ ನೆಲ್ಲಿಕಟ್ಟೆ ಉದ್ಘಾಟನೆ ಮಾಡಲಿದ್ದಾರೆ. ವಿವಿಧ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಮಾನಾಥ ರೈರವರ ಅಭಿಮಾನಿಗಳು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here