ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಭಾರತ ಐಕ್ಯತಾ ಯಾತ್ರೆಯ ಕೆಪಿಸಿಸಿ ಸಂಯೋಜಕರಾಗಿ ಎಂ.ಎಸ್ ಮಹಮ್ಮದ್ ನೇಮಕ

0

ವಿಟ್ಲ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯ ಕೆಪಿಸಿಸಿ ಸಂಯೋಜಕರನ್ನಾಗಿ ದ.ಕ.ಜಿಲ್ಲೆಯಿಂದ ಎಂ.ಎಸ್ ಮಹಮ್ಮದ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ರವರು ನೇಮಕ ಮಾಡಿದ್ದಾರೆ.

ಎಂ.ಎಸ್ ಮಹಮ್ಮದ್ ರವರು ದ.ಕ.ಜಿಲ್ಲಾ ಯುವಕ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ವಿಟ್ಲ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ, ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾಗಿ, ಕೆಪಿಸಿಸಿ ಕಾರ್ಯದರ್ಶಿಯಾಗಿ, ದ.ಕ.ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿ ಸತತವಾಗಿ ಮೂರು ಬಾರಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಕರ್ತವ್ಯ ನಿರ್ವಹಿಸಿದ್ದರು.

ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಿದ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡರಲ್ಲಿ ಇವರೂ ಓರ್ವರಾಗಿದ್ದಾರೆ. ಇವರ ಪ್ರಾಮಾಣಿಕತೆ ಪಕ್ಷ ಸಂಘಟನೆಯನ್ನು ಗುರುತಿಸಿ ಕಾಂಗ್ರೆಸ್ ಪಕ್ಷ ಭಾರತ್ ಜೋಡೋ ಭಾರತ ಐಕ್ಯತಾ ಯಾತ್ರೆಯ ಕೆಪಿಸಿಸಿ ಸಂಯೋಜಕರನ್ನಾಗಿ ನೇಮಕ ಮಾಡಿದೆ.

LEAVE A REPLY

Please enter your comment!
Please enter your name here