ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯ ಮನೆಗೆ ಮಾಣಿಲ ಶ್ರೀ ಭೇಟಿ, ಸಾಂತ್ವನ

0

ಪುತ್ತೂರು: ಮುಸ್ಲಿಂ ಯುವಕನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಹಿಂದೂ ಮಹಿಳೆಯ ಮನೆಗೆ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಸೆ.15 ರಂದು ಭೇಟಿ ನೀಡಿ ಸಾಂತ್ವನ ಹೇಳಿದರು. ಕೆಯ್ಯೂರಿನಲ್ಲಿರುವ ಮಹಿಳೆಯ ಮನೆಗೆ ಭೇಟಿ ನೀಡಿದ ಸ್ವಾಮೀಜಿ ಇಂತಹ ಘಟನೆ ಇನ್ನು ಮುಂದೆ ಎಲ್ಲಿಯೂ ನಡೆಯಬಾರದು, ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ, ಕೆದಂಬಾಡಿ ಗ್ರಾಪಂ ಅಧ್ಯಕ್ಷ ರತನ್ ರೈ ಕುಂಬ್ರ, ಉಪಾಧ್ಯಕ್ಷ ಭಾಸ್ಕರ ರೈ ಮಿತ್ರಂಪಾಡಿ, ಪ್ರವೀಣ್ ಶೆಟ್ಟಿ ತಿಂಗಳಾಡಿ, ಕೃಷ್ಣ ಕುಮಾರ್ ಇದ್ಯಪೆ ಅಲ್ಲದೆ ರವಿ ಕುಮಾರ್ ರೈ ಕೆದಂಬಾಡಿಮಠ, ಚಂದ್ರ ಇದ್ಪಾಡಿ, ನಿಶಾಂತ್, ಕೆಯ್ಯೂರು ಗ್ರಾಪಂ ಮಾಜಿ ಸದಸ್ಯ ಕಿಟ್ಟ ಅಜಿಲ, ಪ್ರಜ್ವತ್ ರೈ ಮಿತ್ರಂಪಾಡಿ, ಶ್ಯಾಮಸುಂದರ್ ರೈ ಸಾಗು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here