’ಭಾರತ್ ಜೋಡೋ’ ಭಾರತ ಐಕ್ಯತಾ ಯಾತ್ರೆಯ ಸಂಯೋಜಕರಾಗಿ ದಿವ್ಯಪ್ರಭಾ ಗೌಡ ನೇಮಕ

0

ಪುತ್ತೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ’ಭಾರತ್ ಜೋಡೋ’ ಯಾತ್ರೆಯ ಸಂಯೋಜಕರನ್ನಾಗಿ  ದಿವ್ಯಪ್ರಭಾ ಗೌಡ ಅವರನ್ನು ನೇಮಕ ಮಾಡಲಾಗಿದೆ.

ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆಯಾಗಿರುವ ದಿವ್ಯಪ್ರಭಾ ಗೌಡ ಚಿಲ್ತಡ್ಕ ಅವರು, ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾಗಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂಧೀಪ್ ಸಿಂಗ್ ಸುರ್ಜೇವಾಲ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಶಿಫಾರಸ್ಸು ಮೇರೆಗೆ ದಿವ್ಯಪ್ರಭಾ ಗೌಡ ಅವರನ್ನು ಆಯ್ಕೆ ಮಾಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here