ಬಾಲಕಿಯ ಅಪಹರಣ ಪ್ರಕರಣದ ಆರೋಪಿಗೆ ಜಾಮೀನು ಮಂಜೂರು

0

ಪುತ್ತೂರು: ಬಾಲಕಿಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಕಡಬ ಕೊಂಬಾರು ನಿವಾಸಿ ರಾಮಣ್ಣ ಆರೋಪಿಯಾಗಿದ್ದು, ಸೆ. 3ರಂದು ಆಲಂಕಾರು ಖಾಸಗಿ ಶಾಲೆಗೆ ಹೋಗುತ್ತಿದ್ದ ಬಾಲಕಿಯೋರ್ವಳನನ್ನು ಬೆದರಿಸಿ ಮನೆಯಲ್ಲಿ ಕೂಡಿ ಹಾಕಿರುವ ಕುರಿತು ಬಾಲಕಿ ನೀಡಿದ ದೂರಿನಂತೆ ರಾಮಣ್ಣ ಅವರ ವಿರುದ್ಧ ಕಡಬ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಇದೀಗ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ಜಾಮೀನು ಮಂಜೂರು ಮಾಡಿದೆ. ಆರೋಪಿ ಪರ ವಕೀಲರಾದ ಮಾದವ ಪೂಜಾರಿ ಮತ್ತು ಮೋಹಿನಿ ಕೆ ವಾದಿಸಿದರು.

LEAVE A REPLY

Please enter your comment!
Please enter your name here