ಪುತ್ತೂರು ಆಸ್ಪತ್ರೆಯ ಜನರೇಟರ್‌ನ ಬ್ಯಾಟರಿ ಕಳವು ಮಾಡಿದ ಆರೋಪಿಗೆ ಜಾಮೀನು ಮಂಜೂರು

0

ಪುತ್ತೂರು: ದರ್ಬೆ ಹಿತ ಆಸ್ಪತ್ರೆಯ ಜನರೇಟರ್‌ನ ಬ್ಯಾಟರಿ ಕಳವು ಮಾಡಿದ ಆರೋಪಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಕೇರಳದ ಎರ್ನಾಕುಲಂ ನಿವಾಸಿ ಪನಿಕ್ಕರ್ ಆರೋಪಿಯಾಗಿದ್ದು, ಜನರೇಟರ್‌ಗೆ ಅಳವಡಿಸಿದ ಬ್ಯಾಟರಿ ಕಳವಾದ ಕುರಿತು ಸೆ. 15ರಂದು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಅಜಿತ್ ಕುಮಾರ್ ಅವರುನೀಡಿದ ದೂರಿನಂತೆ ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿ ಪನಿಕ್ಕರ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ಜಾಮೀನು ಮಂಜೂರು ಮಾಡಿದೆ. ಆರೋಪಿ ಪರ ವಕೀಲರಾದ ಮಾದವ ಪೂಜಾರಿ, ರಾಕೇಶ್ ಬಲ್ನಾಡು, ನಿಶಾ ಕುಮಾರಿ ವಾದಿಸಿದರು.

LEAVE A REPLY

Please enter your comment!
Please enter your name here