ಸೆ.18:ಎಂ.ಸಿ.ಸಿ ಬ್ಯಾಂಕಿನ ಪುತ್ತೂರು ಶಾಖೆಯ ಗ್ರಾಹಕರ ಸಮಾವೇಶ

0

ಪುತ್ತೂರು: ಮಂಗಳೂರು ಹಂಪನಕಟ್ಟೆಯಲ್ಲಿ ಆಡಳಿತ ಕಛೇರಿ ಹೊಂದಿರುವ ಎಂ.ಸಿ.ಸಿ ಬ್ಯಾಂಕ್ ಲಿಮಿಟೆಡ್ ಇದರ ಶತಮಾನೋತ್ತರ ದಶಮಾನೋತ್ಸವದ ಅಂಗವಾಗಿ ಪುತ್ತೂರು ಶಾಖೆಯ ಗ್ರಾಹಕರ ಸಮಾವೇಶವು ಸೆ.18 ರಂದು ಸಂಜೆ ಎಪಿಎಂಸಿ ರಸ್ತೆಯ ಕ್ರಿಸ್ಟೋಫರ್ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಜರಗಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಸಿ.ಸಿ ಬ್ಯಾಂಕ್‌ನ ಅಧ್ಯಕ್ಷ ಅನಿಲ್ ಲೋಬೊ ವಹಿಸಿಕೊಳ್ಳಲಿರುವರು. ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜಿನ ಕ್ಯಾಂಪಸ್ ನಿರ್ದೇಶಕ ವಂ|ಸ್ಟ್ಯಾನಿ ಪಿಂಟೋರವರು ಸಮಾವೇಶವನ್ನು ಉದ್ಘಾಟಿಸಲಿರುವರು. ಅತಿಥಿಗಳಾಗಿ ಪುತ್ತೂರು ಆದರ್ಶ ಆಸ್ಪತ್ರೆಯ ವೈದ್ಯಾಧಿಕಾರಿ ಡಾ|ಎಂ.ಕೆ ಪ್ರಸಾದ್ ಭಂಡಾರಿ, ಪುತ್ತೂರು ಚರ್ತಕ ಸಂಘದ ಅಧ್ಯಕ್ಷ ಜೋನ್ ಕುಟಿನ್ಹಾರವರು ಭಾಗವಹಿಸಲಿರುವರು. ಎಂ.ಸಿ.ಸಿ ಬ್ಯಾಂಕ್‌ನ ಗ್ರಾಹಕರು ಈ ಸಮಾವೇಶದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಎಂ.ಸಿ.ಸಿ ಬ್ಯಾಂಕ್ ಶಾಖಾ ವ್ಯವಸ್ಥಾಪಕರಾದ ಜೆ.ಪಿ ರೊಡ್ರಿಗಸ್, ಶಾಖಾ ವ್ಯವಸ್ಥಾಪಕರಾದ ಶರುನ್ ಪಿಂಟೊ, ಉಪಾಧ್ಯಕ್ಷರು, ಆಡಳಿತ ಮಂಡಳಿ ನಿರ್ದೇಶಕರು, ಮಹಾ ಪ್ರಬಂಧಕರು, ಉಪ ಮಹಾ ಪ್ರಬಂಧಕರು ಹಾಗೂ ಸಿಬ್ಬಂದಿ ವರ್ಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here