ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀರಾಮ ಮಂದಿರದಲ್ಲಿ ನವರಾತ್ರಿ ಉತ್ಸವ ಆಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: ಶ್ರೀಕ್ಷೇತ್ರ ಸನ್ಯಾಸಿಗುಡ್ಡೆ ಕೆದಂಬಾಡಿ ಶ್ರೀರಾಮ ಮಂದಿರದಲ್ಲಿ ಸೆ. 26 ರಿಂದ ಅ. 4 ರವರೆಗೆ ನವರಾತ್ರಿ ಉತ್ಸವವು ವಿವಿಧ ಧಾರ್ಮಿಕ, ಭಜನಾ ಸೇವೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಅದರ ಆಮಂತ್ರಣ ಪತ್ರ ಬಿಡುಗಡೆ ಇತ್ತೀಚೆಗೆ ಮಂದಿರದಲ್ಲಿ ನಡೆಯಿತು.

ಭಜನಾ ಮಂದಿರ ಅಧ್ಯಕ್ಷ ಬೆದ್ರುಮಾರು ಜೈ ಶಂಕರ್ ರೈ, ಉಪಾಧ್ಯಕ್ಷ ವಿಜಯ ಕುಮಾರ್ ರೈ ಕೋರಂಗ, ಪ್ರ. ಕಾರ್ಯದರ್ಶಿ ಸಂತೋಷ್ ರೈ ಕೋರಂಗ, ಕೋಶಾಧಿಕಾರಿ ಐ. ಸಿ. ಕೈಲಾಸ್ ಕೆದಂಬಾಡಿ, ಜತೆ ಕಾರ್ಯದರ್ಶಿ ಮುಂಡಾಳಗುತ್ತು ಸುರೇಶ್ ರೈ ಮಾಣಿಪ್ಪಾಡಿ, ಗೌರವ ಸಲಹೆಗಾರರಾದ ರಾಜೀವ ರೈ ಕೋರಂಗ, ಸಮಿತಿ ಸದಸ್ಯರು, ಶ್ರೀರಾಮ ಭಜನಾ ಸಮಿತಿ ಅಧ್ಯಕ್ಷ ಕರುಣಾಕರ ರೈ ಕೋರಂಗ ಹಾಗೂ ಪದಾಧಿಕಾರಿಗಳು, ಸದಸ್ಯರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here