ಟ್ರಸ್ಟ್‌ಗೆ ಹಣ ಸಂಗ್ರಹಣೆ ನೆಪದಲ್ಲಿ ಮತಾಂತರಕ್ಕೆ ಯತ್ನ ಆರೋಪ – ಅಪರಿಚಿತರನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

0

ಪುತ್ತೂರು: ಅಪರಿಚಿತ ಕೆಲವರು ಈಶ್ವರಮಂಗಲ ಪರಿಸರದಲ್ಲಿ ಮನೆ ಮನೆಗೆ ತೆರಳಿ ಟ್ರಸ್ಟ್‌ಗೆ ಹಣ ಸಂಗ್ರಹಣೆ ಮಾಡುತ್ತಿರುವುದನ್ನು ಕಂಡು ಸಂಶಯಗೊಂಡ ಸಾರ್ವಜನಿಕರು ಅವರನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಸೆ.16ರಂದು ಈಶ್ವರಮಂಗಲದಲ್ಲಿ ನಡೆದಿದೆ.

ಮೈಸೂರು ಮೂಲದವರೆನ್ನಲಾದ ಐದು ಮಂದಿ ಟ್ರಸ್ಟ್‌ವೊಂದಕ್ಕೆ ನೆಟ್ಟಣಿಗೆ ಮುಡ್ನೂರು, ಈಶ್ವರಮಂಗಲ ಪರಿಸರದಲ್ಲಿ ಮನೆ ಮನೆಗೆ ತೆರಳಿ ಹಣ ಸಂಗ್ರಹಿಸುತ್ತಿದ್ದರು. ಇವರ ಕೈಯಲ್ಲಿ ಶಿಲುಬೆ ಇರುವುದನ್ನು ಗಮನಿಸಿದ ಸಾರ್ವಜನಿಕರು ಮತಾಂತರಗೊಳಿಸುವ ಉದ್ದೇಶದಿಂದ ಆಗಮಿಸಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಬಳಿಕ ಸಂಪ್ಯ ಠಾಣಾ ಪೊಲೀಸರು ತಂಡದವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿ ಎಚ್ಚರಿಕೆ ನೀಡಿ ಬಿಡುಗಡೆಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here