ನೆಲ್ಯಾಡಿ ಬೆಥನಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಇಂಜಿನಿಯರ‍್ಸ್ ಡೇ ಆಚರಣೆ

0

ನೆಲ್ಯಾಡಿ: ಇಲ್ಲಿನ ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸಂಸ್ಥೆಯ ಸಾಂಸ್ಕೃತಿಕ ವಿಭಾಗದಲ್ಲಿ ಆಶ್ರಯದಲ್ಲಿ ಸೆ.15ರಂದು ಇಂಜಿನಿಯರ್ಸ್ ಡೇ ಆಚರಿಸಲಾಯಿತು.


ಸರ್.ಎಮ್ ವಿಶ್ವೇಶ್ವರಯ್ಯರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಹರಿಪ್ರಸಾದ್‌ರವರು ವಿಶ್ವೇಶ್ವರಯ್ಯರವರ ಜೀವನದ ಸಾಧನೆಯ ಬಗ್ಗೆ ತಿಳಿಸಿದರು. ಬಳಿಕ ಕಿರಿಯ ತರಬೇತಿ ಅಧಿಕಾರಿ ಸುನಿಲ್ ಜೋಸೆಫ್‌ರವರ ನೇತೃತ್ವದಲ್ಲಿ ಸರ್.ಎಂ ವಿಶ್ವೇಶ್ವರಯ್ಯನವರ ಸಾಧನೆಯ ವಿಡಿಯೋ ಪ್ರದರ್ಶನ ಮಾಡಲಾಯಿತು. ಸಂಸ್ಥೆಯ ಸುಪೀರಿಯರ್ ರೆ. ಫಾ. ತೋಮಸ್ ಬಿಜಿಲಿ ಒಐಸಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಪ್ರಾಚಾರ್ಯ ಸಜಿ ಕೆ ತೋಮಸ್ ಸಂದರ್ಭೋಚಿತವಾಗಿ ಮಾತನಾಡಿದರು. ಸುಬ್ರಾಯ ನಾಯಕ್ ಸ್ವಾಗತಿಸಿ, ನಿರೂಪಿಸಿದರು. ತರಬೇತಿ ಅಧಿಕಾರಿ ಜೋನ್ ವಂದಿಸಿದರು.

LEAVE A REPLY

Please enter your comment!
Please enter your name here