ನಿಡ್ಪಳ್ಳಿ; ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

0

ನಿಡ್ಪಳ್ಳಿ; ಶ್ರೀ ಶಾಂತದುರ್ಗಾ ದೇವಸ್ಥಾನ ಶ್ರೀ ಕ್ಷೇತ್ರ ನಿಡ್ಪಳ್ಳಿ ಇಲ್ಲಿ ಸೆ.26 ರಿಂದ ಅ.5 ರವರೆಗೆ ನಡೆಯಲಿರುವ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ ಸೆ.16 ರಂದು ದೇವಸ್ಥಾನದಲ್ಲಿ ನಡೆಯಿತು.
ಶ್ರೀ ಉಳ್ಳಾಕುಲು ಪರಿವಾರ ದೈವಗಳ ದೈವಸ್ಥಾನ ಇದರ ಅನುವಂಶಿಕ ಮೊಕ್ತೇಸರ ಪ್ರವೀಣ ಎನ್. ಆರಿಗ ನಿಡ್ಪಳ್ಳಿ ಗುತ್ತು, ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾರಾಯಣ ರೈ ಕೊಪ್ಪಳ, ಕಾರ್ಯದರ್ಶಿ ಕುಮಾರ ನರಸಿಂಹ ಬುಳೆನಡ್ಕ, ಕೋಶಾಧಿಕಾರಿ ಪದ್ಮನಾಭ ಬೋರ್ಕರ್ ಬ್ರಹ್ಮರಗುಂಡ, ನಿಕಟಪೂರ್ವ ಅಧ್ಯಕ್ಷ ಹಾಲಿ ಸದಸ್ಯ ನಾಗೇಶ ಗೌಡ ಪುಳಿತ್ತಡಿ, ಸದಸ್ಯರಾದ ದಿವ್ಯಾ ಕೆ. ಶೆಟ್ಟಿ ಪುತ್ತೂರು, ತಿಮ್ಮಣ್ಣ ರೈ ಆನಾಜೆ, ರಾಮಚಂದ್ರ ಮಣಿಯಾಣಿ ಬೊಳುಂಬುಡೆ, ಪ್ರಧಾನ ಅರ್ಚಕ ನವೀನ್ ಹೆಬ್ಬಾರ್ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here