2.52 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಕೂಟೇಲು ಸೇತುವೆ ; ಶಾಸಕ ಸಂಜೀವ ಮಠಂದೂರರಿಂದ ಲೋಕಾರ್ಪಣೆ

0

ಪುತ್ತೂರು: ಬೆಟ್ಟಂಪಾಡಿಯಿಂದ ಸುಳ್ಯಪದವಿಗೆ ಸಂಪರ್ಕ ಕಲ್ಪಿಸುವ ನಿಡ್ಪಳ್ಳಿ ಗ್ರಾಮದ ಕೂಟೇಲು ಸೇತುವೆಯ ಲೋಕಾರ್ಪಣೆ ಕಾರ್ಯಕ್ರಮ ಸೆ.18ರಂದು ನಿಡ್ಪಳ್ಳಿಯಲ್ಲಿ ನಡೆಯಿತು.ಶಾಸಕ ಸಂಜೀವ ಮಠಂದೂರು ದೀಪ ಬೆಳಗಿಸಿ ತೆಂಗಿನಕಾಯಿ ಒಡೆಯುವ ಮೂಲಕ ಸೇತುವೆ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಅಭಿಯಂತರ ರಾಜಾರಾಂ,ನಿಡ್ಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ.ಡಿ,ಉಪಾಧ್ಯಕ್ಷ ವೆಂಕಟ್ರಮಣ ಬೋರ್ಕರ್,ಪಾಣಾಜೆ ಸಿ.ಎ ಬ್ಯಾಂಕ್ ಅಧ್ಯಕ್ಷ ಪದ್ಮನಾಭ ಬೋರ್ಕರ್,ಬೆಟ್ಟಂಪಾಡಿ ಗ್ರಾಂ.ಪಂ ಅಧ್ಯಕ್ಷೆ ಪವಿತ್ರ.ಡಿ,ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವ,ಮಾಜಿ ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್,ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಆರ್.ಸಿ ನಾರಾಯಣ್,ಬಿಜೆಪಿ ಗ್ರಾಮ ಸಮಿತಿಯ ಅಧ್ಯಕ್ಷ ನಾಗೇಶ್,ಗುತ್ತಿಗೆದಾರರಾದ ಉಡುಪಿ ಶ್ರೀ ಕೇದಾರನಾಥ ಕನ್ಟ್ರಕ್ಷನ್ ನ ಕೆಮ್ತೂರು ಕೃಷ್ಣಮೂರ್ತಿ ಭಟ್,ಜುನೈದ್ ಪುತ್ತೂರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


ಪಾಣಾಜೆ ಸಿ.ಎ ಬ್ಯಾಂಕ್ ಅಧ್ಯಕ್ಷ ಪದ್ಮನಾಭ ಬೋರ್ಕರ್ ವಂದಿಸಿ,ಮಾಜಿ ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here