ಕುಂಬ್ರ ಭಜನಾ ಮಂದಿರದಲ್ಲಿ ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆ, ಅನ್ನಸಂತರ್ಪಣೆ

0

ಪುತ್ತೂರು: ಕುಂಬ್ರ ಶ್ರೀರಾಮ ಭಜನಾ ಮಂದಿರ ಕುಂಬ್ರದಲ್ಲಿ ಸಾಮೂಹಿಕ ಲಕ್ಷ್ಮಿ ಸಹಿತ ಶ್ರೀಸತ್ಯನಾರಾಯಣ ಪೂಜೆಯು ಸೆ.17 ರಂದು ಭಕ್ತಾಭಿಮಾನಿಗಳ ಸಹಕಾರದಿಂದ ವಿಜೃಂಭಣೆಯಿಂದ ನಡೆಯಿತು.

ಪ್ರಧಾನಿ ನರೇಂದ್ರ ಮೋದಿಜೀಯವರ ಜನ್ಮ ದಿನೋತ್ಸವದ ಅಂಗವಾಗಿ ಇದೇ ಸಂದರ್ಭದಲ್ಲಿ ವಿಶೇಷ ಪ್ರಾರ್ಥನೆ ಪೂಜೆ ಸಲ್ಲಿಸಲಾಯಿತು.ಮಧ್ಯಾಹ್ನ ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು. ಭಜನಾ ಮಂದಿರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ, ಸತ್ಯನಾರಾಯಣ ಪೂಜಾ ಸಮಿತಿ ಸಂಚಾಲಕ ಪುರಂದರ ಶೆಟ್ಟಿ ಮುಡಾಲ ಹಾಗೂ ಸರ್ವ ಸದಸ್ಯರು ಹಾಗೂ ಊರಿನ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here