ಪುತ್ತೂರಿನ ಅಬ್ಸಲ್ಯೂಟ್ ಅಕಾಡೆಮಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕ ಬಿಡುಗಡೆ

0

ಪುತ್ತೂರು: ಇಲ್ಲಿನ ನೆಲ್ಲಿಕಟ್ಟೆಯ ಅಬ್ಸಲ್ಯೂಟ್ ಲರ್ನಿಂಗ್ ಅಕಾಡೆಮಿಯಲ್ಲಿ ಸಿಇಟಿ, ಜೆಇಇ ಮತ್ತು ನೀಟ್ ಪರೀಕ್ಷೆಗಳ ಅಭ್ಯಾಸ ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು.

ಸತ್ಯಸಾಯಿ ಲೋಕಸೇವಾ ಪಿಯು ಕಾಲೇಜು ಅಳಿಕೆಯ ರಾಸಾಯನ ಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರಮೋದ್ ಹಿರಣ್ಯ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಗಳನ್ನು ಎದುರಿಸಲು ವಿದ್ಯಾರ್ಥಿಗಳು ಮನೋಬಲವನ್ನು ಹೊಂದಬೇಕು ಮತ್ತು ನಿರಂತರ ಅಭ್ಯಾಸ ಅವಶ್ಯಕ ಎಂದರು. ಸಂಸ್ಥೆಯ ಶೈಕ್ಷಣಿಕ ನಿರ್ದೇಶಕರಾದ ಶರತ್ ಎನ್‌ಕೆ ಮಾತನಾಡಿ, ಸಂಸ್ಥೆಯು ಕಳೆದ ಸಾಲಿನ ಸಿಇಟಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ತೋರಿರುವುದಲ್ಲದೆ, ವಿದ್ಯಾರ್ಥಿಗಳ ಅವಶ್ಯಕತೆಯನ್ನು ಪೂರೈಸುವಲ್ಲಿ ಬಧ್ಧವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ವಿಘ್ನೇಶ್ ಎಚ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕಿ ಕುಮಾರಿ ಜಯಂತಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here