ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

0

ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾದ ಘಟನೆ ಬಂಟ್ವಾಳ ತಾಲೂಕು ಪುಣಚ ಗ್ರಾಮದ ಪೊಯ್ಯಮೂಲೆ ಎಂಬಲ್ಲಿ ನಡೆದ‌ ಬಗ್ಗೆ ವರದಿಯಾಗಿದೆ. ಬಂಟ್ವಾಳ ತಾಲೂಕು ಪುಣಚ ಗ್ರಾಮದ ಪೊಯ್ಯಮೂಲೆ ನಿವಾಸಿ ಕೃಷ್ಣ ನಾಯ್ಕ್‌(62 ವ.) ಮೃತಪಟ್ಟವರಾಗಿದ್ದಾರೆ.

ಕೃಷ್ಣ ನಾಯ್ಕ ರವರು ಸೆ.೧೭ರಂದು ಮದ್ಯಾಹ್ನ ಬಂಟ್ವಾಳ ತಾಲೂಕು ಪುಣಚ ಗ್ರಾಮದ ಪೊಯ್ಯಮೂಲೆಯಲ್ಲಿರುವ ತನ್ನ ಮನೆಯಿಂದ ಪೇಟೆಗೆಂದು ಹೇಳಿ ಹೋದವರು ಸಂಜೆಯಾದರೂ ಮನೆಗೆ ಹಿಂದಿರುಗಿ ಬಾರದ ಹಿನ್ನೆಲೆಯಲ್ಲಿ ಹತ್ತಿರದ ಮನೆಯ ಸಹಿತ ಸಂಬಂಧಿಕರ ಮನೆಯಲ್ಲಿ ಹುಡುಕಾಟ ನಡೆಸಿದರಾದರೂ ಅವರು ಪತ್ತೆಯಾಗಿರಲಿಲ್ಲ.‌ ಬಳಿಕ ತನ್ನ‌ ತಂದೆಯನ್ನು ಹುಡುಕಿ ಕೊಡುವಂತೆ ಕೃಷ್ಣ ನಾಯ್ಕ್ ರವರ ಪುತ್ರ ನವೀನಕುಮಾರ್ ವಿಟ್ಲ ಪೊಲೀಸ್ ಠಾಣೆಗೆ ದೂರು‌ ನೀಡಿದ್ದರು. ಪೊಲೀಸರು ನಾಪತ್ತೆ ಪ್ರಕರಣ ದಾಖಲಿಕೊಂಡು ತನಿಖೆ ಆರಂಭಿಸುತ್ತಿದ್ದಂತೆ ಕೃಷ್ಣ ನಾಯ್ಕ್ ರವರ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ತೆರಳಿದ ವಿಟ್ಲ ಠಾಣಾ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here