ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ ಬ್ರಹ್ಮಕಲಶೋತ್ಸವದ ಹಿನ್ನೆಲೆ ವಲಯ ಸಮಿತಿ ರಚನೆ

0

ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ 2023ರ ಮಾರ್ಚ್ ತಿಂಗಳಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀಕೃಷ್ಣ ಗುರೂಜಿಯವರ ಉಪಸ್ಥಿತಿಯಲ್ಲಿ ತಮಿಳುನಾಡಿನ ತಂಜಾವೂರು ಅಮ್ಮಪೇಟೆಯಲ್ಲಿ ವಲಯ ಸಮಿತಿಯ ರಚನೆ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಬ್ರಹ್ಮಣ್ಯಂ ತಂಜಾವೂರುರವರು ನಮ್ಮ ವಲಯದಿಂದ ಸಾಧ್ಯವಾದಷ್ಟು ಕ್ಷೇತ್ರದ ಜೀರ್ಣೋದ್ಧಾರಕ್ಕೆ ಸಹಕಾರ ನೀಡುತ್ತೇವೆ ಎಂದರು. ಈ ಸಂಧರ್ಭದಲ್ಲಿ ಕ್ಷೇತ್ರದ ಪದಾಧಿಕಾರಿಗಳು ಬ್ರಹ್ಮಕಲಶೋತ್ಸವದ ಮಾಹಿತಿ ನೀಡಿದರು. ಮಂಗಳಮ್ ತಂಜಾವೂರು, ಗಣೇಶ್ ಬೊಂಡಾಲ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಲಯ ಸಮಿತಿಯನ್ನು ರಚಿಸಲಾಯಿತು.

ತಂಜಾವೂರು ಅಮ್ಮ ಪೇಟೆ ವಲಯ ಸಮಿತಿಯ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ತಂಜಾವೂರು, ಉಪಾಧ್ಯಕ್ಷರಾಗಿ ತ್ಯಾಗರಾಜ ತಂಜಾವೂರು, ಕಾರ್ಯದರ್ಶಿಯಾಗಿ ಕನಕರಾಜ್ ತಂಜಾವೂರು, ಜತೆ ಕಾರ್ಯದರ್ಶಿಯಾಗಿ ಜಾನಕಿ, ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ವಿಜಯ, ವಲರ್ ಮತಿ, ದರ್ಶನ್, ನಾಗರಾಜ ಅಜಯ್ ರಘುರಾಮ, ಶಿವಗುರು ಮೊದಲಾದವರನ್ನು ಆಯ್ಕೆ ಮಾಡಲಾಯಿತು. ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ ಹರೀಶ್ ಕೊಕ್ಕಡ ಸ್ವಾಗತಿಸಿ, ರವಿ ಎಸ್.ಎಂ. ಕುಕ್ಕಾಜೆ ವಂದಿಸಿದರು.

LEAVE A REPLY

Please enter your comment!
Please enter your name here