ವಿದ್ಯಾಮಾತಾದಲ್ಲಿ ತರಬೇತಿ ಪಡೆದ ನಿತಿನ್ ಎನ್.ಡಿ. ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಆಯ್ಕೆ

0

ಪುತ್ತೂರು : ಪುತ್ತೂರಿನ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದಿರುವ ನಿತಿನ್ ಎನ್.ಡಿ ರವರು ಕರ್ನಾಟಕ ಪೊಲೀಸ್ ನೇಮಕಾತಿ 2022ನೇ ಸಾಲಿನ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗೆ ಆಯ್ಕೆಯಾಗಿದ್ದಾರೆ. ಮಡಿಕೇರಿ ತಾಲೂಕಿನ ಜೋಡಪಾಲ ನಿವಾಸಿ ನಿತಿನ್ ಎನ್.ಡಿ.ರವರು ನಿವೃತ್ತ ಯೋಧರಾಗಿದ್ದು ವಿದ್ಯಾಮಾತಾ ಅಕಾಡೆಮಿಯಲ್ಲಿ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಮತ್ತು ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ<ತೆ ಲಿಖಿತ ಪರೀಕ್ಷೆಯ ತರಬೇತಿಯನ್ನು ಆರು ತಿಂಗಳುಗಳ ಕಾಲ ಪಡೆದುಕೊಂಡಿದ್ದರು. ಅಲ್ಲದೇ ಮುಂಬರುವ ಸಬ್ ಇನ್‌ಸ್ಪೆಕ್ಟರ್ ನೇಮಕಾತಿಯ ಲಿಖಿತ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಾರೆ.

ಕರ್ನಾಟಕ ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಮೂರು ಸಾವಿರದ ಅರವತ್ತ ನಾಲ್ಕು ಅರ್ಜಿ ಕರೆಯಲಾಗಿದ್ದು ಯುವಕರು ಪೂರ್ವ ತಯಾರಿ ಮಾಡಿಕೊಂಡು ನೇಮಕಾತಿಗೆ ಆಯ್ಕೆಯಾಗಲು ಉತ್ತಮ ಅವಕಾಶವಿದ್ದು ವಿದ್ಯಾಮಾತಾದಲ್ಲಿ ತರಬೇತಿ ಆರಂಭವಾಗಲಿದೆ. ಹೆಚ್ಚೂ ಮಾಹಿತಿಗಾಗಿ ಫೋನ್ 9620468869/9148935808 ಸಂಪರ್ಕಿಸುವಂತೆ ಸಂಸ್ಥೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here