ನ.20: ಆತೂರು ದೇವಸ್ಥಾನದ ವಠಾರದಲ್ಲಿ ಆಲಂಕಾರು ವಲಯ ಒಕ್ಕಲಿಗ ಗೌಡ ಸಂಘದ ಕ್ರೀಡಾಕೂಟ-ಪೂರ್ವಭಾವಿ ಸಭೆ

0

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ ಆಲಂಕಾರು ವಲಯದ ಕೊಯಿಲ ಗ್ರಾಮ ಸಮಿತಿ ಆತಿಥ್ಯದಲ್ಲಿ ನ.20ರಂದು ಆತೂರು ಶ್ರೀ ಸದಾಶಿವ ದೇವಸ್ಥಾನದ ವಠಾರದಲ್ಲಿ ಆಲಂಕಾರು ವಲಯ ಒಕ್ಕಲಿಗ ಗೌಡ ಸಂಘದ ಕ್ರೀಡಾಕೂಟ ನಡೆಯಲಿದ್ದು ಇದರ ಪೂರ್ವಭಾವಿ ಸಭೆ ಸೆ.18ರಂದು ಆತೂರು ಶ್ರೀ ಸದಾಶಿವ ದೇವಸ್ಥಾನದಲ್ಲಿ ನಡೆಯಿತು.

ಹಿರಿಯರಾದ ಲಿಂಗಪ್ಪ ಗೌಡ ಕಡೆಂಬ್ಯಾಲು ಅಧ್ಯಕ್ಷತೆ ವಹಿಸಿದ್ದರು. ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಹಿರಿಯ ಸಮಿತಿ ಅಧ್ಯಕ್ಷ ರಾಮಣ್ಣ ಗೌಡ ಸುರುಳಿ, ಯುವ ಸಮಿತಿ ಅಧ್ಯಕ್ಷ ರಾಮಣ್ಣ ಗೌಡ ದೋಳ, ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರಿ ಸಂಘದ ಆಲಂಕಾರು ಶಾಖಾ ಸಲಹಾ ಸಮಿತಿ ಅಧ್ಯಕ್ಷೆ ತೇಜಸ್ವಿನಿಶೇಖರ ಗೌಡ ಕಟ್ಟಪುಣಿ, ಆತೂರು ಶ್ರೀ ಸದಾಶಿವ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಯಧುಶ್ರೀ ಆನೆಗುಂಡಿ, ಅಭಿವೃದ್ದಿ ಸಮಿತಿ ಅಧ್ಯಕ್ಷ ಶೀನಪ್ಪ ಗೌಡ ವಳಕಡಮ ಮೊದಲಾದವರು ಭಾಗವಹಿಸಿ ಸಲಹೆ ಸೂಚನೆ ನೀಡಿದರು. ಕ್ರೀಡಾಕೂಟ ಸಂಬಂಧ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ವಿನೋಧರ ಮಾಳ, ಕಾರ್ಯದರ್ಶಿಯಾಗಿ ಸುಧೀಶ ಪಟ್ಟೆ ಹಾಗೂ ವಿವಿಧ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಒಕ್ಕಲಿಗ ಗೌಡ ಸೇವಾ ಸಂಘದ ಕೊಯಿಲ ಗ್ರಾಮ ಹಿರಿಯ ಸಮಿತಿಯ ಅಧ್ಯಕ್ಷ ಭವಾನಿ ಶಂಕರ ಪ್ರಸ್ತಾವಿಕವಾಗಿ ಮಾತನಾಡಿ, ಸ್ವಾಗತಿದರು. ಯುವ ಸಮಿತಿ ಅಧ್ಯಕ್ಷ ತಿಮ್ಮಪ್ಪ ಗೌಡ ಸಂಕೇಶ ವಂದಿಸಿದರು. ಸುಧೀಶ್ ಪಟ್ಟೆ ನಿರೂಪಿಸಿದರು.

LEAVE A REPLY

Please enter your comment!
Please enter your name here