ಇಚ್ಲಂಪಾಡಿ ಹಾ.ಉ.ಸಹಕಾರಿ ಸಂಘದ ಅಧ್ಯಕ್ಷರಾಗಿ ಕೇಶವ ಗೌಡ ಅಲೆಕ್ಕಿ ಆಯ್ಕೆ

0

ನೆಲ್ಯಾಡಿ: ಇಚ್ಲಂಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಕೇಶವ ಗೌಡ ಅಲೆಕ್ಕಿ ಆಯ್ಕೆಯಾಗಿದ್ದಾರೆ.
ಈ ಹಿಂದೆ ಅಧ್ಯಕ್ಷರಾಗಿದ್ದ ಮಹಾವೀರ ಜೈನ್‌ರವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನೂತನ ಅಧ್ಯಕ್ಷರ ಆಯ್ಕೆಗಾಗಿ ಸೆ.17ರಂದು ಸಂಘದ ಕಚೇರಿಯಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು. ಪುತ್ತೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಮಾರಾಟಾಧಿಕಾರಿ ಶೋಭಾ ಎನ್.ಎಸ್. ಚುನಾವಣಾಧಿಕಾರಿಯಾಗಿದ್ದರು.

ಅಧ್ಯಕ್ಷ ಸ್ಥಾನಕ್ಕೆ ಕೇಶವ ಗೌಡರವರು ಮಾತ್ರ ನಾಮಪತ್ರ ಸಲ್ಲಿಸಿದ್ದು ಅವರ ಅವಿರೋಧ ಆಯ್ಕೆ ನಡೆಯಿತು. ಸಭೆಯಲ್ಲಿ ಉಪಾಧ್ಯಕ್ಷ ಶಾಂತಾರಾಮ, ನಿರ್ದೇಶಕರಾದ ಕೆ.ಮಹಾವೀರ ಜೈನ್, ರಾಧಾಕೃಷ್ಣ ಕೆ., ವರ್ಗೀಸ್ ಅಬ್ರಹಾಂ, ಆನಂದ ಶೆಟ್ಟಿ, ಜೋನ್ ಅಬ್ರಹಾಂ, ರಾಜಶೇಖರ ನಾಯರ್, ಅಣ್ಣಿ ನಾಯಕ್, ಕೆ.ಟಿ.ವಲ್ಸಮ್ಮ, ರೋಸಮ್ಮ ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ಪ್ರವೀಣ್‌ಕುಮಾರ್, ಹಾಲ ಪರೀಕ್ಷಕ ತೇಜಸ್, ಸಹಾಯಕ ತನಿಯ ಸಹಕರಿಸಿದರು. ಕೇಶವ ಗೌಡರವರು ಕಳೆದ ೩ ವರ್ಷಗಳಿಂದ ಸಂಘದಲ್ಲಿ ನಿರ್ದೇಶಕರಾಗಿದ್ದಾರೆ. ಇವರು ಇಚ್ಲಂಪಾಡಿ ನೇರ್ಲ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದ ಆಡಳಿತ ಮಂಡಳಿ ಅಧ್ಯಕ್ಷರಾಗಿದ್ದಾರೆ. ಅಲ್ಲದೇ ಇಚ್ಲಂಪಾಡಿ ಬೀಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ಕೋಶಾಧಿಕಾರಿಯಾಗಿ, ಜೀರ್ಣೋದ್ದಾರ ಸಮಿತಿಯ ಜೊತೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಇಚ್ಲಂಪಾಡಿ ದಕ್ಷಾ ಕಮ್ಯುನಿಕೇಶನ್ ಮಾಲಕರಾಗಿರುವ ಇವರು ಇಚ್ಲಂಪಾಡಿಯಲ್ಲಿ ಸುದ್ದಿಬಿಡುಗಡೆ ಹಾಗೂ ಇತರೇ ಪತ್ರಿಕೆಯ ವಿತರಕರೂ ಆಗಿದ್ದಾರೆ.

LEAVE A REPLY

Please enter your comment!
Please enter your name here