ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಕುಡಿಯುವ ನೀರಿನ ಶುದ್ಧೀಕರಣ ಯಂತ್ರ ಹಸ್ತಾಂತರ

0

ವಿಟ್ಲ: ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಎಲ್ ಐ ಸಿ ಸಂಸ್ಥೆಯ 66ನೇ ಹುಟ್ಟುಹಬ್ಬ ಪ್ರಯುಕ್ತ ಅರುವತ್ತು ಸಾವಿರ ರೂಪಾಯಿ ವೆಚ್ಚದ ಕುಡಿಯುವ ನೀರಿನ ಶುದ್ಧೀಕರಣ ಯಂತ್ರ ಹಸ್ತಾಂತರ ಮಾಡಲಾಯಿತು.

 ಎಲ್ ಐಸಿಯ ಹಿರಿಯ ಶಾಖಾಧಿಕಾರಿ ನಾರಾಯಣ ಗೌಡ, ಅಭಿವೃದ್ಧಿ ಅಧಿಕಾರಿ ಮಧ್ವರಾಜ್ ಬಿ.ಕಲ್ಮಾಡಿ, ನಾರಾಯಣ ಬಲ್ಯ, ಪ್ರತಿನಿಧಿಗಳಾದ ನವೀನ್ ಕೊಡ್ಮಾಣ್, ಮೋಹನ್ ಕೆ.ಶ್ರೀಯಾನ್, ವೈದ್ಯಾಧಿಕಾರಿ ಡಾ.ಪುಷ್ಪಲತಾ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮಧ್ವರಾಜ್ ಕಲ್ಮಾಡಿ ಕಾರ್ಯಕ್ರಮ ನಿರೂಪಿಸಿದರು. ದಿನೇಶ್ ಮಾಮೇಶ್ವರ ವಂದಿಸಿದರು.

LEAVE A REPLY

Please enter your comment!
Please enter your name here