ಇರ್ದೆ:ಶಾರದೋತ್ಸವ, ನವರಾತ್ರಿ ಉತ್ಸವದ ಆಮಂತ್ರಣ ಬಿಡುಗಡೆ

0

ಪುತ್ತೂರು:ಇರ್ದೆ ಶ್ರೀ ವಿಷ್ಣುಮೂತಿ ದೇವಸ್ಥಾನದಲ್ಲಿ ಸೆ.26ರಿಂದ ಅ.5ರ ತನಕ ನಡೆಯಲಿರುವ ನವರಾತ್ರಿ ಪೂಜೆ ಹಾಗೂ ಸೆ.5ರಂದು ನಡೆಯಲಿರುವ ಶ್ರೀಶಾರದೋತ್ಸವದ ಆಮಂತ್ರಣ ಪತ್ರಿಕೆಯನ್ನು ಇತ್ತೀಚೆಗೆ ಬಿಡುಗಡೆಗೊಳಿಸಲಾಯಿತು.

ದೇವಸ್ಥಾನದ ತಂತ್ರಿ ಕುಂಟಾರು ರವೀಶ ತಂತ್ರಿಯವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಭಟ್ ಘಾಟೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ರಾಧಾಕೃಷ್ಣ ರೈ ಬಾಲ್ಯೊಟ್ಟುಗುತ್ತು, ಶಾರದೋತ್ಸವ ಸಮಿತಿ ಅಧ್ಯಕ್ಷ ಪುಷ್ಪರಾಜ ಶೆಟ್ಟಿ ಬೈರಮಜಲು, ಗೌರವಾಧ್ಯಕ್ಷ ಶರತ್ ಕುಮಾರ್ ಮಾರ್ಲ ಬಾಲ್ಯೊಟ್ಟುಗುತ್ತು, ಪ್ರಧಾನ ಕಾರ್ಯದರ್ಶಿ ಶೀನಪ್ಪ ನಾಯ್ಕ ಬದಂತಡ್ಕ, ಕಾರ್ಯದರ್ಶಿ ಹರೀಶ್ ಉಪ್ಪಳಿಗೆ ಸೇರಿದಂತೆ ಸಮಿತಿ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here