ಬಜತ್ತೂರು ಗ್ರಾ.ಪಂ.ಜಮಾಬಂದಿ ಸಭೆ

0

ನೆಲ್ಯಾಡಿ: ಬಜತ್ತೂರು ಗ್ರಾ.ಪಂ.ನ 2021-22ನೇ ಸಾಲಿನ ಜಮಾಬಂದಿ ಸಭೆ ಸೆ.17ರಂದು ಗ್ರಾಮ ಪಂಚಾಯತು ಸಭಾಭವನದಲ್ಲಿ ನಡೆಯಿತು.
ದ.ಕ.ಮಂಗಳೂರು ಇಲ್ಲಿನ ಮೀನುಗಾರಿಕಾ ಸಹಾಯಕ ನಿರ್ದೇಶಕ ದಿಲೀಪ್‌ಕುಮಾರ್‌ರವರು ಜಮಾಬಂದಿ ಅಧಿಕಾರಿಯಾಗಿದ್ದರು. ದ.ಕ.ಮಂಗಳೂರು ಇಲ್ಲಿನ ಮೀನುಗಾರಿಕಾ ಇಲಾಖೆ ಪ್ರಥಮ ದರ್ಜೆ ಸಹಾಯಕ ರವಿಕುಮಾರ್ ಸಹಕರಿಸಿದರು. ಸಭೆಯಲ್ಲಿ ಗ್ರಾ.ಪಂ.ನ ಲೆಕ್ಕಪತ್ರಗಳ ಪರಿಶೀಲನೆ ನಡೆಸಲಾಯಿತು. ಗ್ರಾ.ಪಂ.ಅಧ್ಯಕ್ಷೆ ಪ್ರೇಮಾ ಬಿ., ಉಪಾಧ್ಯಕ್ಷೆ ಸ್ಮಿತಾ, ಸದಸ್ಯರಾದ ವಿಮಲ, ಯಶೋಧ, ಗಂಗಾಧರ ಪಿ.ಎನ್., ಮೋನಪ್ಪ ಗೌಡ, ಉಮೇಶ ಓಡ್ರಪಾಲು, ಪ್ರೆಸಿಲ್ಲಾ ಡಿ.ಸೋಜ, ಗ್ರಾಮಸ್ಥರು ಉಪಸ್ಥಿತರಿದ್ದರು. ಕಾರ್ಯದರ್ಶಿ ಗಿರಿಯಪ್ಪ ಗೌಡ ಸ್ವಾಗತಿಸಿ, ನಿರೂಪಿಸಿದರು. ಸಿಬ್ಬಂದಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here