ಬಿಜೆಪಿ ನಗರ ಮಂಡಲದ ಕಾರ್ಯನಿರ್ವಹಣಾ ಸಭೆ

0

ಪುತ್ತೂರು : ಬಿಜೆಪಿ ಪುತ್ತೂರು ನಗರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆಯು ಸೆ.21 ರಂದು ಬೆಳಗ್ಗೆ ಕೆಮ್ಮಾಯಿ ವಿಷ್ಣುಮಂಟಪದಲ್ಲಿ ನಗರ ಮಂಡಲ ಅಧ್ಯಕ್ಷ ಪಿ.ಜಿ‌.ಜಗನ್ನಿವಾಸ ರಾವ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಪಕ್ಷದ ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನಪರ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ಹಾಗೂ ಮಾಹಿತಿಯನ್ನು ನೀಡಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆಯವರು ಪಕ್ಷ ಸಂಘಟನೆ ಮತ್ತು ಮುಂದಿನ ಕಾರ್ಯಸೂಚಿಗಳನ್ನು ತಿಳಿಸಿದರು‌. ನಗರ ಸಭಾಧ್ಯಕ್ಷ ಜೀವಂಧರ್ ಜೈನ್ ರವರು ಪುತ್ತೂರಿನ ಅಭಿವೃದ್ಧಿ ಬಗ್ಗೆ ನಗರಸಭೆ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಸನ್ಮಾನ:
ಇತ್ತೀಚೆಗೆ ಕೇಂದ್ರ ಸರಕಾರದ ದಿಶಾ ಸಮಿತಿಗೆ ನಾಮನಿರ್ದೇಶನಗೊಂಡ ಪಕ್ಷದ ಹಿರಿಯ ಕಾರ್ಯಕರ್ತ ರಾಮದಾಸ್ ಹಾರಾಡಿಯವರನ್ನು ಗೌರವಿಸಲಾಯಿತು. ಮಂಡಲ ಉಪಾಧ್ಯಕ್ಷೆ ಜ್ಯೋತಿ ಆರ್ ನಾಯಕ್ ಪ್ರಾರ್ಥಿಸಿದರು, ನಗರ ಮಂಡಲ ಪ್ರ.ಕಾರ್ಯದರ್ಶಿ ಜಯಶ್ರೀ ಎಸ್‌ ಶೆಟ್ಟಿಯವರು ಸ್ವಾಗತಿಸಿ, ನಗರಸಭಾ ಸದಸ್ಯೆ ಗೌರಿ ಬನ್ನೂರುರವರು ವಂದಿಸಿದರು , ಮಂಡಲ ಉಪಾಧ್ಯಕ್ಷ ಇಂದುಶೇಖರ್ ರವರು ಕಾರ್ಯಕ್ರಮ ನಿರ್ವಹಿಸಿದರು. ಪಕ್ಷದ ಪದಾಧಿಕಾರಿಗಳು, ನಗರಸಭಾ ಸದಸ್ಯರು, ಮಹಾಶಕ್ತಿ ಕೇಂದ್ರ- ಶಕ್ತಿ ಕೇಂದ್ರ ಪ್ರಮುಖರು, ಜಿಲ್ಲಾ ಸಮಿತಿ ಸದಸ್ಯರು, ಮೋರ್ಚ ಪ್ರಕೋಷ್ಠದ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here