ಪತ್ನಿ, ಮಗು ದೂರವಾಗಿರುವ ಚಿಂತೆ: ಖಿನ್ನತೆಯಿಂದ ವ್ಯಕ್ತಿ ಆತ್ಮಹತ್ಯೆ

0

ಕಡಬ: ಪತ್ನಿ ಮತ್ತು ಮಗು ತನ್ನಿಂದ ದೂರವಾಗಿದ್ದಾರೆ ಎಂದು ಮನನೊಂದು ವ್ಯಕ್ತಿಯೋರ್ವರು ನೇಣು ಬಿಗದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಎಲ್ಯ ನಿವಾಸಿ ಬೆನ್ನಿ ವಿ ಸಿ (42) ಆತ್ಮಹತ್ಯೆ ಮಾಡಿಕೊಂಡವರು. ಇವರ ಪತ್ನಿ ಕಳೆದ ಆರು ವರ್ಷಗಳಿಂದ ಇವರಿಂದ ದೂರವಾಗಿ ಮಗುವಿನೊಂದಿಗೆ ತವರು ಮನೆಯಲ್ಲಿ ವಾಸವಿದ್ದಾರೆ ಹೀಗಾಗಿ ತಾಯಿ ಮತ್ತು ಇವರು ಮಾತ್ರ ಮನೆಯಲ್ಲಿ ವಾಸವಿದ್ದರು. ಸೋಮವಾರ ಇವರ ತಾಯಿ ತನ್ನ ಹಿರಿಯ ಮಗಳ ಮನೆಗೆ ತೆರಳಿದ್ದ ಸಂದರ್ಭ ಬೆನ್ನಿಯವರು ಮನೆಯೊಳಗಡೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕ ಖಿನ್ನತೆಯಿಂದ ಪುತ್ರ ಮೃತಪಟ್ಟಿದ್ದಾನೆ ಎಂದು ಈತನ ತಾಯಿ ಕಡಬ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here