ಕಟ್ಟತ್ತಾರು ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

0

ಪುತ್ತೂರು: ಕೆಯ್ಯೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಟ್ಟತ್ತಾರು ಸ.ಹಿ.ಪ್ರಾ.ಶಾಲೆಯಲ್ಲಿ ಸೆ.೧೩ರಂದು ನಡೆಯಿತು. ಕೆಯ್ಯೂರು ಗ್ರಾ.ಪಂ ಸದಸ್ಯ ಬಟ್ಯಪ್ಪ ರೈ ದೇರ್ಲ ಉದ್ಘಾಟಿಸಿದರು. ಗ್ರಾ.ಪಂ ಅಧ್ಯಕ್ಷೆ ಜಯಂತಿ ಭಂಡಾರಿ ಅಧ್ಯಕ್ಷತೆ ವಹಿತಿ ಶುಭ ಹಾರೈಸಿದರು. ಗ್ರಾ.ಪಂ ಸದಸ್ಯೆ ನೆಬಿಸಾ, ಮಾಜಿ ಅಧ್ಯಕ್ಷೆ ಎ.ಕೆ. ಜಯರಾಮ ರೈ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ಕುಮಾರ್ ರೈ, ಪದಾಧಿಕಾರಿ ರಾಮಣ್ಣ ರೈ, ಕಟ್ಟತ್ತಾರು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ನವೀದ್, ಮಾಜಿ ಅಧ್ಯಕ್ಷ ಉಮ್ಮರ್ ಬಿ.ಎಂ ವೇದಿಕೆಯಲ್ಲಿ ಉಪಸ್ಥಿತರಿದ್ದು ಸಂದರ್ಭೋಚಿತವಾಗಿ ಮಾತುಗಳಾನ್ನಾರಿದರು.

ಕೆಯ್ಯೂರು ಕ್ಲಸ್ಟರ್‌ನ ಸಂಪನ್ಮಾಲ ವ್ಯಕ್ತಿ ನಿರಂಜನ್ ಎಂ.ಜೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲಾ ಮುಖ್ಯಗುರು ತಾರಾ ಎಸ್ ಸ್ವಾಗತಿಸಿದರು. ಸಹಶಿಕ್ಷಕಿ ಸಂಧ್ಯಾ ಜಿ.ಕೆ ವಂದಿಸಿದರು. ಸಹಶಿಕ್ಷಕಿ ವಸಂತಿ ಕೆ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕರಾದ ಇಂದಿರಾ ಕೆ, ಗಂಗಾಧರ ನಾಯ್ಕಬಿ, ಶೈಲಜಾ ಎಸ್ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕ್ಲಸ್ಟರ್‌ನ ೧೨ ಶಾಲೆಗಳ ಸ್ಪರ್ಧಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here