ಸೆ.24: ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಡಾ|| ಎಂ.ಎನ್.ಆರ್‌ರವರಿಗೆ ಅಭಿನಂದನಾ ಸಮಾರಂಭ

0

ಪುತ್ತೂರ: ಸಹಕಾರ ರತ್ನ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಅಭಿನಂದನಾ ಸಮಿತಿ ಮಂಗಳೂರು ಇದರ ವತಿಯಿಂದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಬೆಂಗಳೂರು ಇದರ ಅಧ್ಯಕ್ಷರಾಗಿ ಎರಡನೇ ಬಾರಿ ಅವಿರೋಧವಾಗಿ ಆಯ್ಕೆಗೊಂಡಿರುವ ಡಾ| ಎಂ.ಎನ್.ರಾಜೇಂದ್ರ ಕುಮಾರ್‌ರವರಿಗೆ ಸಮಸ್ತ ಸಹಕಾರಿ ಬಂಧುಗಳಿಂದ ಗೌರವ ಸಮರ್ಪಣೆಯ ಅಭಿನಂದನಾ ಸಮಾರಂಭ ಸೆ.24 ರಂದು ಮಧ್ಯಾಹ್ನ ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಲಿದೆ.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನೂತನ ನಿರ್ದೇಶಕರಾಗಿ ಆಯ್ಕೆಗೊಂಡ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪುರವರನ್ನು ಕೂಡ ಇದೇ ಸಂದರ್ಭದಲ್ಲಿ ಅಭಿನಂದಿಸುವ ಕಾರ್ಯಕ್ರಮ ನಡೆಯಲಿದೆ. ಅಧ್ಯಕ್ಷತೆ ವಹಿಸಲಿರುವ ರಾಜ್ಯಸಭಾ ಸದಸ್ಯರಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಅಭಿನಂದನೆ ಸಲ್ಲಿಸಲಿದ್ದು ಜಾಗತಿಕ ಬಂಟರ ಒಕ್ಕೂಟ ಮಂಗಳೂರು ಇದರ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಭಿನಂದನಾ ಭಾಷಣ ಮಾಡಲಿದ್ದಾರೆ. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಶುಭಾಶಂಸನೆ ಮಾಡಲಿದ್ದು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಬೆಂಗಳೂರು ಇದರ ನಿರ್ದೇಶಕ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಮತ್ತು ಸೌತ್ ಇಂಡಿಯಾ ಅದಾನಿ ಗ್ರೂಪ್ಸ್‌ನ ಅಧ್ಯಕ್ಷ ಕಿಶೋರ್ ಆಳ್ವ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಡಾ| ಎಂ.ಎನ್.ರಾಜೇಂದ್ರ ಕುಮಾರ್ ಅಭಿನಂದನಾ ಸಮಿತಿ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಉಪಾಧ್ಯಕ್ಷರುಗಳಾದ ಜಯಕರ್ ಶೆಟ್ಟಿ ಇಂದ್ರಾಳಿ ಮತ್ತು ಪ್ರಸಾದ್ ಕೌಶಲ್ ಶೆಟ್ಟಿ, ಕಾರ್ಯಾಧ್ಯಕ್ಷ ಭಾಸ್ಕರ್ ಎಸ್.ಕೋಟ್ಯಾನ್ ಮತ್ತು ಪ್ರಧಾನ ಕಾರ್ಯದರ್ಶಿ ರಾಜು ಎಸ್.ಪೂಜಾರಿ ತಿಳಿಸಿದ್ದಾರೆ.

“ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಬೆಂಗಳೂರು ಇದರ ಅಧ್ಯಕ್ಷರಾಗಿ ಎರಡನೇ ಬಾರಿಗೆ ಆಯ್ಕೆಗೊಂಡು ಮಂಗಳೂರಿಗೆ ಆಗಮಿಸುತ್ತಿರುವ ನಮ್ಮೆಲ್ಲರ ನೆಚ್ಚಿನ ಡಾ| ಎಂ.ಎನ್.ರಾಜೇಂದ್ರ ಕುಮಾರ್‌ರವರನ್ನು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ 10.30 ಕ್ಕೆ ಸ್ವಾಗತಿಸುವ ಕಾರ್ಯಕ್ರಮ ನಡೆದು ಅಲ್ಲಿಂದ ಸಭಾಂಗಣದ ತನಕ ಮೆರವಣಿಗೆಯಲ್ಲಿ ಕರೆತರುವ ಕಾರ್ಯಕ್ರಮ ನಡೆಯಲಿದೆ.

– ಶಶಿಕುಮಾರ್ ರೈ ಬಾಲ್ಯೊಟ್ಟು, ಅಧ್ಯಕ್ಷರು ಡಾ| ಎಂ.ಎನ್.ರಾಜೇಂದ್ರ ಕುಮಾರ್ ಅಭಿನಂದನಾ ಸಮಿತಿ ಮಂಗಳೂರು

LEAVE A REPLY

Please enter your comment!
Please enter your name here