‘ಪುತ್ತೂರ‍್ದ ಪಿಲಿರಂಗ್’ ಆಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು : ಪುತ್ತೂರು ಕಿಲ್ಲೆ ಮೈದಾನದಲ್ಲಿ ಅ.1ರಂದು ನಡೆಯಲಿರುವ ‘ಪುತ್ತೂರ‍್ದ ಪಿಲಿರಂಗ್’ ಸೀಸನ್-1 ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯಿತು.

ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದರು. ಪಿಲಿರಂಗ್ ಸೀಸನ್-1 ಸ್ಪರ್ಧಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ., ಸಮಿತಿ ಗೌರವಾಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ, ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಕಾರ್ಯಾದ್ಯಕ್ಷ ಶಿವರಾಮ್ ಆಳ್ವ, ಉಪಾಧ್ಯಕ್ಷ ರೋಶನ್ ರೈ ಬನ್ನೂರು, ಖಜಾಂಜಿ ರಂಜಿತ್ ಬಂಗೇರ, ಪ್ರಧಾನ ಕಾರ್ಯದರ್ಶಿ ಪೂರ್ಣೇಶ್ ಭಂಡಾರಿ, ಕಾರ್ಯದರ್ಶಿ ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಸನತ್ ರೈ ಏಳ್ನಾಡುಗುತ್ತು, ಸನತ್ ರೈ ವಳತ್ತಡ್ಕ, ಪವನ್, ಪ್ರಜ್ವಲ್ ರೈ ತೋಟ್ಲ, ಕೃಷ್ಣಪ್ರಸಾದ್ ಆಳ್ವ, ಶ್ರೀಕಾಂತ್ ಗೌಡ, ಅಭಿಷೇಕ್ ಬೆಳ್ಳಿಪ್ಪಾಡಿ, ಶರತ್ ಕೇಪುಳು, ಸುದೇಶ್ ಕುಮಾರ್ ಚಿಕ್ಕಪುತ್ತೂರು, ವಿಶ್ವಜೀತ್ ಅಮ್ಮುಂಜ, ಭಾನುಪ್ರಕಾಶ್ ಆಚಾರ್ಯ, ಕಿಶೋರ್ ತಾರಿಗುಡ್ಡೆ, ಕಾರ್ತಿಕ್, ಮನೋಜ್ ಮೊದಲದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here