ಪುತ್ತೂರು: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ಸಮಗ್ರ ಅಭಿವೃಧ್ದಿಗಾಗಿ ವಿಶೇಷ ಅನುದಾನ ಒದಗಿಸಿಕೊಡಲು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರಿಗೆ ವ್ಯವಸ್ಥಾಪನಾ ಸಮಿತಿ ವತಿಯಿಂದ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್, ಕೃಷ್ಣಕುಮಾರ್ ರೈ ತಿಂಗಳಾಡಿ, ಅರಣ್ ವಿಟ್ಲ, ವ್ಯವಸ್ಥಾಪನಾ ಸಮತಿ ಅಧ್ಯಕ್ಷ ಸುಧಾಕರ ರಾವ್ ಆರ್ಯಾಪು, ಸದಸ್ಯರಾದ ದೇವಯ್ಯ ಗೌಡ ದೇವಸ್ಯ, ದಾಮೋದರ ರೈ ತೊಟ್ಲ, ವಿಠಲ ರೈ ಮೇರ್ಲ, ಕಿಶೋರ ಗೌಡ ಮರಿಕೆ ಉಪಸ್ಥಿತರಿದ್ದರು.