ಎನ್.ಎಸ್.ಯು.ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ “ಗ್ರಾಮಾಭಿಯಾನ” ಕ್ಕೆ ಚಾಲನೆ

0

ಪುತ್ತೂರು:ಎನ್.ಎಸ್.ಯು.ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಗ್ರಾಮೀಣ ಮಟ್ಟದಿಂದಲೇ ವಿದ್ಯಾರ್ಥಿ ನಾಯಕತ್ವವನ್ನು ಬೆಳೆಸುವ ಸಲುವಾಗಿ ಆರಂಭಿಸಿರುವ “ಗ್ರಾಮಾಭಿಯಾನ” NSUI ಸದಸ್ಯತ್ವ ಅಭಿಯಾನಕ್ಕೆ ಸೆ.24ರಂದು ಅಳಕೆಮಜಲಿನ ಇಡ್ಕಿದು ಗ್ರಾಮದಲ್ಲಿ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೋಮಶೇಖರ್ ಶೆಟ್ಟಿ, NSUI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, NSUI ಕರ್ನಾಟಕ ರಾಜ್ಯ ಉಪಾಧ್ಯಕ್ಷ ಫಾರೂಕ್, NSUI ಪ್ರಧಾನ ಕಾರ್ಯದರ್ಶಿ ಅನ್ವಿತ್ ಕಟೀಲ್, NSUI ದಕ್ಷಿಣ ಕನ್ನಡ ಕಾರ್ಯಾಧ್ಯಕ್ಷ ಪವನ್ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಬಾತೀಷ್ ಅಳಕೆಮಜಲು, ಯುವ ಮುಖಂಡ ಅನ್ಸಾರುದ್ದೀನ್ ಸಾಲ್ಮರ, NSUI ಮುಖಂಡರಾದ ನಜೀಬ್ ಮಂಚಿ,ಜವಾದ್,ಫಯಾಝ್,ಮಿಸ್ಬಾಹ್,ಆ್ಯಸ್ಟನ್, ಹಾರಿಸ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಎನ್.ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಚಿರಾಗ್ ರೈ ಅವರು ಸ್ವಾಗತಿಸಿ ನಿರೂಪಿಸಿದರು.

LEAVE A REPLY

Please enter your comment!
Please enter your name here