ನೇರಳಕಟ್ಟೆ ಇಂಡಿಯನ್ ಅಡಿಟೋರಿಯಂನಲ್ಲಿ ಪಡ್ಯಾರ ಮನೆ ಬಾಬು ಆಳ್ವರವರ ಶ್ರದ್ಧಾಂಜಲಿ ಸಭೆ

0

ವಿಟ್ಲ: ಕಾಂಗ್ರೆಸ್‌ನ ಹಿರಿಯ ಮುಖಂಡರಾಗಿದ್ದ ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಕೊಡಾಜೆ ನಿವಾಸಿ ಪಡ್ಯಾರಮನೆ ಬಾಬು ಆಳ್ವ ರವರ ಉತ್ತರಕ್ರೀಯೆಯು ಸೆ.೨೫ರಂದು ನೇರಳಕಟ್ಟೆಯಲ್ಲಿರುವ ಇಂಡಿಯನ್ ಅಡಿಟೋರಿಯಂನಲ್ಲಿ ನಡೆಯಿತು.

ಮಾಜಿ ಸಚಿವ ಬಿ.ರಮಾನಾಥ ರೈ, ವಿಜಯ ಬ್ಯಾಂಕ್ ನ ನಿವೃತ್ತ ಅಧಿಕಾರಿ ಜಯರಾಜ್ ಭಂಡಾರಿ, ತುಂಬೆ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಗಂಗಾಧರ ಆಳ್ವ ಅನಂತಾಡಿ ಮೊದಲಾದವರು ನುಡಿನಮನ ಸಲ್ಲಿಸಿದರು.

 


ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಶಕುಂತಳಾ ಟಿ.ಶೆಟ್ಟಿ, ಮಾಜಿ ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ.ಎಸ್. ಮಹಮ್ಮದ್, ಪದ್ಮಶೇಖರ ಜೈನ್, ಕೋಟಿಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ‌ ಶೆಟ್ಟಿ ರಂಗೋಲಿ, ಕಾರ್ಯದರ್ಶಿ ಜಗನ್ನಾಥ ಚೌಟ ಬದಿಗುಡ್ಡೆ, ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ., ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಯಂತ ಶೆಟ್ಟಿ ಕೆದಿಕಂಡೆಗುತ್ತು, ನಾರಾಯಣ ಆಳ್ವ ಕೊಡಾಜೆ, ರಾಮ್ ದಾಸ್ ರೈ ಮದ್ಲ ಸೇರಿದಂತೆ ನೂರಾರು ಮಂದಿ ಉಪಸ್ಥಿತರಿದ್ದರು. ತುಂಬೆ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಗಂಗಾಧರ ಆಳ್ವ ಅನಂತಾಡಿರವರು ಕಾರ್ಯಕ್ರಮ ನಿರೂಪಿಸಿದರು.

 

LEAVE A REPLY

Please enter your comment!
Please enter your name here