ಕೆಯ್ಯೂರು ಜಂಕ್ಷನ್‌ನಲ್ಲಿ ಹಾಕಿದ್ದ ಭಾರತ್ ಜೋಡೋ ಯಾತ್ರೆಯ ಬ್ಯಾನರ್ ಕಳವು

0

ಪುತ್ತೂರು: ಕೆಯ್ಯೂರು ಗ್ರಾಪಂ ವ್ಯಾಪ್ತಿಯ ಕೆಯ್ಯೂರು ದೇವಿನಗರ ಜಂಕ್ಷನ್‌ನಲ್ಲಿ ಗ್ರಾ.ಪಂ ಪರವಾನಗೆ ಪಡೆದುಕೊಂಡು ಅಳವಡಿಸಿದ್ದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯ ವಿಷಯ ಇರುವ ಬ್ಯಾನರ್ ಅನ್ನು ಕಳವು ಮಾಡಲಾಗಿದೆ ಎಂದು ಕೆಯ್ಯೂರು ಗ್ರಾಮೀಣ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷ ಎ.ಕೆ ಜಯರಾಮ ರೈಯವರು ಸಂಪ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕೆಯ್ಯೂರು ಗ್ರಾಮೀಣ ರಾಷ್ಟ್ರೀಯ ಕಾಂಗ್ರೆಸ್ ವತಿಯಿಂದ ಪಂಚಾಯತ್ ಪರವಾನಗೆ ಪಡೆದುಕೊಂಡು ಸೆ.22 ರಂದು ಸಂಜೆ ಕೆಯ್ಯೂರು ದೇವಿನಗರ ಜಂಕ್ಷನ್‌ನಲ್ಲಿ ಬ್ಯಾನರ್ ಅಳವಡಿಸಲಾಗಿತ್ತು. ಈ ಬ್ಯಾನರ್ ಅನ್ನು ಸೆ.24 ರಂದು ರಾತ್ರಿ ಕಿಡಿಗೇಡಿಗಳು ಕಳವು ಮಾಡಿದ್ದಾರೆ. ಗ್ರಾಮದಲ್ಲಿ ಅಶಾಂತಿ ಸೃಷ್ಟಿಸುವ ಸಲುವಾಗಿ ಇಂತಹ ಕೆಲಸಗಳನ್ನು ಮಾಡಲಾಗುತ್ತಿದ್ದು ಕಳವು ಮಾಡಿದವರನ್ನು ಕೂಡಲೇ ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ದೂರಿನಲ್ಲಿ ತಿಳಿಸಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

LEAVE A REPLY

Please enter your comment!
Please enter your name here