ಬೈಕ್‌ಗೆ ಬೆಂಕಿ ಹಾಕಿದ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಯ ಬಂಧನ

0

ಪುತ್ತೂರು: ಮನೆಯೆದುರು ನಿಲ್ಲಿಸಿದ ಬೈಕ್‌ಗೆ ಬೆಂಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದ ವಿಚಾರಣೆಯಲ್ಲಿ ಹಾಜರಾಗದೆ ತಲೆಮರೆಸಿಕೊಂಡ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಪಚ್ಚನಾಡಿ ವೈದ್ಯನಾಥನಗರ ನಿವಾಸಿ ರಮೇಶ್ ಯಾನೆ ರಮೇಶ್ ಆರ್ ಅವರು ಆರೋಪಿಯಾಗಿದ್ದು, ಪುತ್ತೂರಿನಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ ವೇಳೆ ಮನೆಯೆದುರು ನಿಲ್ಲಿಸಿದ ಬೈಕ್‌ಗೆ ಬೆಂಕಿ ಹಾಕಿದ ಪ್ರಕರಣದಲ್ಲಿ ಬಂಧಿತರಾಗಿದ್ದರು. ನ್ಯಾಯಾಲಯದಲ್ಲಿ ಜಾಮೀನು ಪಡೆದು ಬಳಿಕ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿ ಹಾಜರಾಗದೆ ತಲೆಮರೆಸಿಕೊಂಡಿದ್ದರು. ನ್ಯಾಯಾಲಯ ಆರೋಪಿಯ ಮೇಲೆ ವಾರಂಟ್ ಜಾರಿ ಮಾಡಿತ್ತು. ತನಿಖೆ ಕೈಗೆತ್ತಿಕೊಂಡ ಪುತ್ತೂರು ನಗರ ಠಾಣಾ ಪೊಲೀಸರು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವನೆ, ಡಿವೈಎಸ್ಪಿ ಡಾ| ಹೀರಯ್ಯ ಹಿರೇಮಠ್ ಅವರ ನಿರ್ದೇಶನದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮತ್ತು ಎಸ್.ಐ ಶ್ರೀಕಾಂತ್ ರಾಥೋಡ್ ಅವರ ನೇತೃತ್ವದಲ್ಲಿ ಹೆಡ್‌ಕಾನ್‌ಸ್ಟೇಬಲ್ ಪರಮೇಶ್ವರ ಮತ್ತು ಪ್ರಭು ರವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

 

LEAVE A REPLY

Please enter your comment!
Please enter your name here