ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪುತ್ತೂರಿನ ಬೈಲಾಡಿ ಸೊಸೆ ಬಿ.ಎಸ್ ಕನ್ಯಾಕುಮಾರಿ ನೇಮಕ

0

ಪುತ್ತೂರು: ಮಹಿಳೆಯರು ರಾಜಕೀಯವಾಗಿ ಮುಖ್ಯವಾಹಿನಿಗೆ ಬರಬೇಕೆಂಬ ಉದ್ದೇಶದಿಂದ ಸ್ಥಳೀಯ ಸಂಸ್ಥೆಗಳಲ್ಲಿ ಹೆಚ್ಚು ಮೀಸಲಾತಿ ಕಲ್ಪಿಸಿಕೊಟ್ಟ ಜೆಡಿಎಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪುತ್ತೂರು ಬೈಲಾಡಿಯ ಸೊಸೆ ಬಿ.ಎಸ್ ಕನ್ಯಾಕುಮಾರಿ ಅವರು ನೇಮಕಗೊಳಿಸಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಮ್ ಇಬ್ರಾಹಿಂ ಅವರು ಆದೇಶ ಹೊರಡಿಸಿದ್ದಾರೆ.


ಬೈಲಾಡಿ ದಿ.ರಾಮಣ್ಣ ಗೌಡ, ಮಾನಕ್ಕ ದಂಪತಿ ಪುತ್ರ ಹೈಕೋರ್ಟ್ ನ್ಯಾಯವಾದಿ ಶ್ರೀನಿವಾಸ್ ಅವರ ಪತ್ನಿಯಾಗಿರುವ ಬಿ.ಎಸ್ ಕನ್ಯಾಕುಮಾರಿ ಅವರು ಪ್ರಸ್ತುತ ಬೆಂಗಳೂರಿನ ಹಂಪಿನಗರದಲ್ಲಿ ವಾಸ್ತವ್ಯ ಹೊಂದಿದ್ದಾರೆ. ಜೆಡಿಎಸ್ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿರುವ ಇವರು ವಿಜಯನಗರದಲ್ಲಿ ಜನತಾ ಸೇವಾ ಕೋ ಓಪರೇಟಿವ್ ಬ್ಯಾಂಕ್ ನಿರ್ದೇಶಕರಾಗಿದ್ದಾರೆ. 2013ರಲ್ಲಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ವಿಜಯನಗರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.ಜೆಡಿಎಸ್ ವಾರ್ಡ್ ಅಧ್ಯಕ್ಷೆ, ಮಹಿಳಾ ಘಟಕದ ರಾಜ್ಯ ಸಂಘಟನಾ ಕಾರ್ಯದರ್ಶಿ, ಉಪಾಧ್ಯಕ್ಷೆಯಾಗಿ, ಪೇರೆಂಟ್ ಬಾಡಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ, ಹಲವು ಜವಾಬ್ದಾರಿಗಳನ್ನು ನಿರ್ವಹಿಸಿರುವ ಕನ್ಯಾಕುಮಾರಿ ಅವರು ಇದೀಗ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಗೊಂಡಿದ್ದಾರೆ.

LEAVE A REPLY

Please enter your comment!
Please enter your name here