ಮೊಟ್ಟೆತ್ತಡ್ಕ ಮಿಶನ್‌ಮೂಲೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ

0

ಪುತ್ತೂರು: ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಮಿಶನ್‌ಮೂಲೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವರ್ಷಂಪ್ರತಿ ಆಚರಿಸುತ್ತಿರುವ ಸಾರ್ವಜನಿಕ ನವರಾತ್ರಿ ಉತ್ಸವ ಆರಂಭವಾಗಿದ್ದು, ಸೆ.26 ರಂದು ಚಾಲನೆ ನೀಡಲಾಯಿತು.

ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಮೋಹನ್ ರೈ ಮಿಶನ್‌ಮೂಲೆರವರು ಧ್ವಜಾರೋಹಣವನ್ನು ನೆರವೇರಿಸಿ ಉತ್ಸವಕ್ಕೆ ಚಾಲನೆಯಿತ್ತರು. ಬೆಳಿಗ್ಗೆ ದೇವಸ್ಥಾನದ ಪ್ರಧಾನ ಅರ್ಚಕ ಉದಯನಾರಾಯಣ ಕಲ್ಲೂರಾಯ ಸಂಪ್ಯರವರ ನೇತೃತ್ವದಲ್ಲಿ ಸಹಾಯಕ ಅರ್ಚಕ ರಮೇಶ್ ಅಯ್ಯರ್ ಮುಕ್ರಂಪಾಡಿರವರ ಸಹಕಾರದಲ್ಲಿ ಮಹಾಗಣಪತಿ ಹೋಮ ನಡೆಯಿತು. ರಾತ್ರಿ ಮೊಟ್ಟೆತ್ತಡ್ಕ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು ಬಳಿಕ ಮಹಾಪೂಜೆ ನಡೆಯಿತು. ದೇವಸ್ಥಾನದ ಪ್ರಭಾರ ಅಧ್ಯಕ್ಷ ರಾಮ ಶೆಟ್ಟಿ, ಕಾರ್ಯದರ್ಶಿ ಕೆ.ಬಿ ಶೇಖರ, ಜೊತೆ ಕಾರ್ಯದರ್ಶಿ ಲಕ್ಷ್ಮಣ ಶೆಟ್ಟಿ, ಕೋಶಾಧಿಕಾರಿ ಮೋಹನ್ ಕುಮಾರ್, ಲೆಕ್ಕಪರಿಶೋಧಕರಾದ ಬಿ.ವಿಶ್ವನಾಥ ರೈ ಮಿಶನ್‌ಮೂಲೆ, ಆಡಳಿತ ಸಮಿತಿ ಸದಸ್ಯರಾದ ರಮೇಶ್ ರೈ ಮಿಶನ್‌ಮೂಲೆ, ಸತೀಶ್ ರೈ ಮಿಶನ್‌ಮೂಲೆ ಸಹಿತ ನೂರಾರು ಭಕ್ತಾಭಿಮಾನಿಗಳು ಧಾರ್ಮಿಕ ವಿಧಿವಿಧಾನದಲ್ಲಿ ಪಾಲ್ಗೊಂಡರು.

ಶ್ರೀ ಕ್ಷೇತ್ರದಲ್ಲಿ ಇಂದು..
ಮಂಗಳವಾರ ರಾತ್ರಿ ಮನುಕುಮಾರ್ ಶಿವನಗರ ಇವರ ಸಂಚಾಲಕತ್ವದಲ್ಲಿ ಕಲ್ಲೇಗ ಶಿವನಗರ ಶಿವಮಣಿ ಕಲಾಸಂಘದಿಂದ ಸಾಂಸ್ಕೃತಿಕ ಕಲಾರಂಜನೆ ಕಾರ್ಯಕ್ರಮ ಬಳಿಕ ಮಹಾಪೂಜೆ ಜರಗಲಿದೆ ಎಂದು ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here