![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಪಿಎಫ್ಐ ಜಿಲ್ಲಾಧ್ಯಕ್ಷ ಜಾಬೀರ್ ಅರಿಯಡ್ಕರವರನ್ನು ಸಂಪ್ಯ ಪೊಲೀಸರು ವಶಕ್ಕೆ ಪಡೆದು ಕೊಂಡು ಪುತ್ತೂರು ತಹಸೀಲ್ದಾರ್ ಅವರ ಮುಂದೆ ಹಾಜರು ಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಶಾಂತಿ ಭಂಗ ಯತ್ನದ ಪ್ರಕರಣಕ್ಕೆ ಸಂಬಂಧಿಸಿ ಜಾಬೀರ್ ರನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಪ್ರತಿಬಂಧಕ ಕಾಯ್ದೆಯಡಿ ಗರಿಷ್ಠ ಅವಧಿಯ ಮುಚ್ಚಳಿಕೆಗಾಗಿ ತಾಲೂಕು ದಂಡಾಧಿಕಾರಿಯಾಗಿರುವ ತಹಶೀಲ್ದಾರ್ ರವರ ಮುಂದೆ ಹಾಜರುಪಡಿಸಿದ್ದಾರೆ ಎಂದು ವರದಿಯಾಗಿದೆ.