ಸೆ.30ರಂದು ಕೋಡಿಂಬಾಡಿ ಶಾಲೆಯಲ್ಲಿ ಕೊಠಡಿಗಳಿಗೆ ಶಂಕುಸ್ಥಾಪನೆ, ಅಭಿನಂದನಾ ಸಮಾರಂಭ

0

ಪುತ್ತೂರು: ದ.ಕ.ಜಿ.ಪಂ. ಹಿ.ಪ್ರಾ. ಶಾಲೆ ಕೋಡಿಂಬಾಡಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪುತ್ತೂರು ಹಾಗೂ ಗ್ರಾಮ ಪಂಚಾಯತ್ ಕೋಡಿಂಬಾಡಿ ಇದರ ಆಶ್ರಯದಲ್ಲಿ ನೂತನ‌ ಕೊಠಡಿಗಳಿಗೆ ಶಂಕುಸ್ಥಾಪನೆ ಸೆ. 30ರಂದು ಪೂರ್ವಾಹ್ನ 9.30ಕ್ಕೆ ನಡೆಯಲಿದೆ‌.‌

ಶಾಸಕ ಸಂಜೀವ ಮಠಂದೂರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಗ್ರಾ.ಪಂ.ಅಧ್ಯಕ್ಷ ಕೆ‌. ರಾಮಚಂದ್ರ ಪೂಜಾರಿ ಅಧ್ಯಕ್ಷತೆಯಲ್ಲಿ ಅಭಿನಂದನಾ ಸಮಾರಂಭ ನಡೆಯಲಿದ್ದು ಕೋಡಿಂಬಾಡಿ ಹಿ.ಪ್ರಾ.ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ಕೋಡಿಂಬಾಡಿ ಹಿ.ಪ್ರಾ.ಶಾಲೆಯಲ್ಲಿ ಏಳು ವರ್ಷ ಸೇರಿದಂತೆ ಒಟ್ಟು 26 ವರ್ಷ ಶಿಕ್ಷಕ ವೃತ್ತಿ ಮಾಡಿ ಸೇವೆಯಿಂದ ನಿವೃತ್ತರಾಗುತ್ತಿರುವ ಲಕ್ಷ್ಮಿ ಆರ್.‌ರೈ, ಭಾರತೀಯ ಗಡಿಭದ್ರತಾ ಪಡೆಯ ಯೋಧರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿರುವ ಪುಷ್ಪರಾಜ್ ಬಾರ್ತಿಕುಮೇರು ಮತ್ತು ಧಾರವಾಡ ಕೃಷಿ ವಿಶ್ವವಿದ್ಯಾನಿಲಯದ ಎಂ.ಎಸ್ಸಿ. ವಿಭಾಗದಲ್ಲಿ ಚಿನ್ನದ ಪದಕ ಪಡೆದಿರುವ ವಂದನಾ ಸಾಮಂತ್ ನೆಕ್ಕರಾಜೆರವರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here