ಮೈಸೂರು ದಸರಾ ವೇದಿಕೆಯಲ್ಲಿ ಪುತ್ತೂರು ನೃತ್ಯೋಪಾಸನಾ ಕಲಾಕೇಂದ್ರ ತಂಡದಿಂದ ‘ನೃತ್ಯೋಹಂ’ ವೈಭವ

0
ಪುತ್ತೂರು: ಪುತ್ತೂರಿನ ನೃತ್ಯೋಪಾಸನಾ ಕಲಾಕೇಂದ್ರ(ರಿ)  ಇದರ ಕಲಾ ತಂಡದಿಂದ ವಿಶ್ವವಿಖ್ಯಾತ ಮೈಸೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆಯಲ್ಲಿ ಮಂಗಳವಾರ ‘ನೃತ್ಯೋಹಂ’ ಭರತನಾಟ್ಯ ನೃತ್ಯ ಪ್ರದರ್ಶನ ನಡೆಯಿತು.
ನೃತ್ಯ ಗುರು, ವಿದುಷಿ ಶಾಲಿನಿ ಆತ್ಮಭೂಷಣ್ ನಿರ್ದೇಶನದಲ್ಲಿ ಸುಮಾರು 15ಕ್ಕೂ ಅಧಿಕ ಮಂದಿ ಕಲಾವಿದರು ನೃತ್ಯ ಪ್ರದರ್ಶನ ನೀಡಿದರು. ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ಗಾನಭಾರತಿ ವೇದಿಕೆ ನೋಡಲ್ ಅಧಿಕಾರಿಗಳಾದ ರಘುನಾಥ, ಅಶ್ವಿನಿ, ಚಂದ್ರು ಇವರು ಸ್ಮರಣಿಕೆ, ಪ್ರಮಾಣ ಪತ್ರ ವಿತರಿಸಿದರು.

LEAVE A REPLY

Please enter your comment!
Please enter your name here