ವೈಷ್ಣವೀ ನಾಟ್ಯಾಲಯದ ವಿದ್ಯಾರ್ಥಿನಿ ಹರ್ಷಿತಾರಿಗೆ ಕಲಾಶ್ರೀ ಪ್ರಶಸ್ತಿ

0

ಪುತ್ತೂರು : ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ಬೆಂಗಳೂರು ಮತ್ತು ಆರ್.ಎನ್.ಎಸ್. ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬೆಂಗಳೂರಿನಲ್ಲಿ ಡಾ|ಆರ್.ಎನ್.ಶೆಟ್ಟಿಯವರ ಕನಸಿನ ಕೂಸು ಸಭಾಂಗಣದಲ್ಲಿ ಜರಗಿತು. ಮಂಗಳೂರು ವಿವಿ ಕುಲಪತಿ ಡಾ|ಪಿಎಸ್.ಎಡಪಡಿತ್ತಾಯ ಮತ್ತು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಭಾಗಹಿಸಿದ್ದರು.

ಆರ್.ಎನ್.ಎಸ್. ಮುಖ್ಯ ಆಡಳಿತಾಧಿಕಾರಿ ಡಾ| ಸುಧೀರ್ ಪೈ ಕೆ.ಎಲ್. ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಪುತ್ತೂರು ವೈಷ್ಣವಿ ನಾಟ್ಯಾಲಯದ ನೃತ್ಯ ನಿರ್ದೇಶಕಿ ವಿದುಷಿ ಯೋಗೀಶ್ವರಿ ಜಯಪ್ರಕಾಶ್‌ರವರ ಶಿಷ್ಯೆ ವಿದುಷಿ ಹರ್ಷಿತಾ ಎನ್. ಬದಿಯಡ್ಕರರಿಗೆ ಕಲಾಶ್ರೀ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಪ್ರಾಮಶುಪಾಲ ಪ್ರೊ.ರವಿಶಂಕರ್, ಜ್ಞಾನಮಂದಾರ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಎಚ್.ಜೆ.ಸೋಮಶೇಖರ್ ಬೆಂಗಳೂರು ಉಪಸ್ಥಿತರಿದ್ದರು. ಎರಡು ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಂದ ನೃತ್ಯಪ್ರದರ್ಶನ ನಡೆಯಿತು. ಹರ್ಷಿತಾ ಬದಿಯಡ್ಕರವರು ಕನಕಪ್ಪಾಡಿ ಭಾಸ್ಕರ ಹಾಗೂ ರಾಜೇಶ್ವರಿ ದಂಪತಿ ಪುತ್ರಿ.

LEAVE A REPLY

Please enter your comment!
Please enter your name here